<p><strong>ಕನಕಪುರ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಿವಾಳಿಯಾಗಿದ್ದು ಈಗ ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಿ, ಶುಲ್ಕ ವಿಧಿಸಲು ಹೊರಟಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಉಯ್ಯಂಬಳ್ಳಿ ಸತೀಶ್ ಆರೋಪಿಸಿದರು.</p>.<p>ಇಲ್ಲಿನ ಕುರುಪೇಟೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ರೈತ ಸಂಘದ ವತಿಯಿಂದ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಗುಂಡೂರಾವ್ ಸರ್ಕಾರವು ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಲು ಹೋಗಿ ರೈತರ ದಂಗೆ ಎದ್ದಾಗ, ಮೀಟರ್ ಅಳವಡಿಸುವುದಿಲ್ಲ, ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿ ಅದರಂತೆ ನಡೆದುಕೊಂಡಿದ್ದರು.</p>.<p>ಆದರೆ ಈಗ ಬಿಟ್ಟಿ ಭಾಗ್ಯಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ದಿವಾಳಿಯಾಗಿದ್ದು, ರೈತರಿಂದ ಹಣ ವಸೂಲಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತರಿಗೆ ಸುಳ್ಳು ಮಾಹಿತಿ ನೀಡಿ ಆಧಾರ್ ಕಾರ್ಡ್ ಪಡೆದು ಕೃಷಿ ಪಂಪ್ಸೆಟ್ಗಳ ಐಪಿ ನಂಬರ್ಗೆ ಲಿಂಕ್ ಮಾಡುತ್ತಿದ್ದಾರೆ, ಮುಂದೆ ಮೀಟರ್ ಅಳವಡಿಸಿ ಶುಲ್ಕ ವಿಧಿಸಲಿದ್ದಾರೆ ಎಂದು ದೂರಿದರು.</p>.<p>ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಾಂಕೇತಿಕವಾಗಿ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ರಾಜ್ಯ ವ್ಯಾಪ್ತಿ ರೈತ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ರೈತ ಮುಖಂಡರಾದ ಶ್ರೀನಿವಾಸ್, ಸಂಪತ್ ಕುಮಾರ್, ದೇವರಾಜು ಮಾತನಾಡಿ ಇಂದು ಒಬ್ಬ ರೈತ ಕೃಷಿ ಪಂಪ್ಸೆಟ್ಗೆ ವಿದ್ಯುತ್ ಸಂಪರ್ಕ ಪಡೆಯಲು 2 ರಿಂದ 3 ಲಕ್ಷ ಖರ್ಚು ಮಾಡಬೇಕಿದೆ. ಅಂತಹ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ರೈತರನ್ನು ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಮುಖಂಡರು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮೀಟರ್ ಅಳವಡಿಕೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೆಸ್ಕಾಂ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಿವಾಳಿಯಾಗಿದ್ದು ಈಗ ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಿ, ಶುಲ್ಕ ವಿಧಿಸಲು ಹೊರಟಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಉಯ್ಯಂಬಳ್ಳಿ ಸತೀಶ್ ಆರೋಪಿಸಿದರು.</p>.<p>ಇಲ್ಲಿನ ಕುರುಪೇಟೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ರೈತ ಸಂಘದ ವತಿಯಿಂದ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಗುಂಡೂರಾವ್ ಸರ್ಕಾರವು ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಲು ಹೋಗಿ ರೈತರ ದಂಗೆ ಎದ್ದಾಗ, ಮೀಟರ್ ಅಳವಡಿಸುವುದಿಲ್ಲ, ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿ ಅದರಂತೆ ನಡೆದುಕೊಂಡಿದ್ದರು.</p>.<p>ಆದರೆ ಈಗ ಬಿಟ್ಟಿ ಭಾಗ್ಯಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ದಿವಾಳಿಯಾಗಿದ್ದು, ರೈತರಿಂದ ಹಣ ವಸೂಲಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತರಿಗೆ ಸುಳ್ಳು ಮಾಹಿತಿ ನೀಡಿ ಆಧಾರ್ ಕಾರ್ಡ್ ಪಡೆದು ಕೃಷಿ ಪಂಪ್ಸೆಟ್ಗಳ ಐಪಿ ನಂಬರ್ಗೆ ಲಿಂಕ್ ಮಾಡುತ್ತಿದ್ದಾರೆ, ಮುಂದೆ ಮೀಟರ್ ಅಳವಡಿಸಿ ಶುಲ್ಕ ವಿಧಿಸಲಿದ್ದಾರೆ ಎಂದು ದೂರಿದರು.</p>.<p>ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಾಂಕೇತಿಕವಾಗಿ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ರಾಜ್ಯ ವ್ಯಾಪ್ತಿ ರೈತ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ರೈತ ಮುಖಂಡರಾದ ಶ್ರೀನಿವಾಸ್, ಸಂಪತ್ ಕುಮಾರ್, ದೇವರಾಜು ಮಾತನಾಡಿ ಇಂದು ಒಬ್ಬ ರೈತ ಕೃಷಿ ಪಂಪ್ಸೆಟ್ಗೆ ವಿದ್ಯುತ್ ಸಂಪರ್ಕ ಪಡೆಯಲು 2 ರಿಂದ 3 ಲಕ್ಷ ಖರ್ಚು ಮಾಡಬೇಕಿದೆ. ಅಂತಹ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ರೈತರನ್ನು ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಮುಖಂಡರು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮೀಟರ್ ಅಳವಡಿಕೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೆಸ್ಕಾಂ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>