<p><strong>ಕನಕಪುರ:</strong> ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಗಟ್ಟಿಗುಂದ ಗ್ರಾಮದ ರೈತ ಸುರೇಶ ಅವರ ಮನೆಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಗುರುವಾರ ಭೇಟಿ ನೀಡಿ ಸಾಂತ್ವನ ತಿಳಿಸಿದರು.</p>.<p>ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟಿಗುಂದ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ಮಾಡಿ ಸುರೇಶ್ ಅವರನ್ನು ಸಾಯಿಸಿತ್ತು.</p>.<p>ಕಾಡಾನೆ ದಾಳಿಯಿಂದ ಕಳೆದ ನಾಲ್ಕು ದಿನಗಳ ಹಿಂದೆ ತಿಪ್ಪೂರು ಗ್ರಾಮದಲ್ಲಿ ಒಬ್ಬ ರೈತ ಶಿವರುದ್ರನನ್ನು ಇದೇ ಒಂಟಿ ಆನೆ ದಾಳಿ ಮಾಡಿ ಸಾಯಿಸಿತ್ತು.</p>.<p>ಒಂದು ವಾರದಲ್ಲಿ ಎರಡನೇ ದಾಳಿಯಾಗಿ ಸುರೇಶ ಅವರು ಬುಧವಾರ ರಾತ್ರಿ ಸಾವಿಗೀಡಾಗಿದ್ದಾರೆ. ಈ ಭಾಗದಲ್ಲಿ ಒಂಟಿ ಕಾಡಾನೆಯಿದ್ದು ಅದು ರೈತರ ಮೇಲೆ ದಾಳಿ ಮಾಡುತ್ತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಸಾಯಿಸಿದೆ.</p>.<p>ಗ್ರಾಮದ ಜನತೆ ಮಾತನಾಡಿ ಒಂಟಿ ಆನೆಯೂ ಮನುಷ್ಯರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿ ಸಾಯಿಸುತ್ತಿದೆ, ಇದೊಂದು ರೀತಿಯ ಕೊಲೆಯಾಗಿದೆ. ಹಾಗಾಗಿ ಈ ಒಂಟಿ ಆನೆಯನ್ನು ಶೀಘ್ರವೇ ಸೆರೆ ಹಿಡಿದು ಬೇರೆ ಕಡೆ ಸ್ಥಳಾಂತರಿಸಬೇಕೆಂದು ಸಂಸದರಲ್ಲಿ ಮನವಿ ಮಾಡಿದರು.</p>.<p>ಸಂಸದರು ಸ್ಥಳದ್ಲಲೇ ಇದ್ದ ಅರಣ್ಯ ಅಧಿಕಾರಿಗಳ ಜೊತೆ ಮಾತನಾಡಿ ಮನುಷ್ಯರ ಮೇಲೆ ದಾಳಿ ಮಾಡಿ, ಇಬ್ಬರು ರೈತರ ಸಾವಿಗೆ ಕಾರಣವಾಗಿರುವ ಈ ಆನೆಯು ಅಪಾಯಕಾರಿಯಾಗಿದೆ. ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಗಟ್ಟಿಗುಂದ ಗ್ರಾಮದ ರೈತ ಸುರೇಶ ಅವರ ಮನೆಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಗುರುವಾರ ಭೇಟಿ ನೀಡಿ ಸಾಂತ್ವನ ತಿಳಿಸಿದರು.</p>.<p>ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟಿಗುಂದ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ಮಾಡಿ ಸುರೇಶ್ ಅವರನ್ನು ಸಾಯಿಸಿತ್ತು.</p>.<p>ಕಾಡಾನೆ ದಾಳಿಯಿಂದ ಕಳೆದ ನಾಲ್ಕು ದಿನಗಳ ಹಿಂದೆ ತಿಪ್ಪೂರು ಗ್ರಾಮದಲ್ಲಿ ಒಬ್ಬ ರೈತ ಶಿವರುದ್ರನನ್ನು ಇದೇ ಒಂಟಿ ಆನೆ ದಾಳಿ ಮಾಡಿ ಸಾಯಿಸಿತ್ತು.</p>.<p>ಒಂದು ವಾರದಲ್ಲಿ ಎರಡನೇ ದಾಳಿಯಾಗಿ ಸುರೇಶ ಅವರು ಬುಧವಾರ ರಾತ್ರಿ ಸಾವಿಗೀಡಾಗಿದ್ದಾರೆ. ಈ ಭಾಗದಲ್ಲಿ ಒಂಟಿ ಕಾಡಾನೆಯಿದ್ದು ಅದು ರೈತರ ಮೇಲೆ ದಾಳಿ ಮಾಡುತ್ತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಸಾಯಿಸಿದೆ.</p>.<p>ಗ್ರಾಮದ ಜನತೆ ಮಾತನಾಡಿ ಒಂಟಿ ಆನೆಯೂ ಮನುಷ್ಯರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿ ಸಾಯಿಸುತ್ತಿದೆ, ಇದೊಂದು ರೀತಿಯ ಕೊಲೆಯಾಗಿದೆ. ಹಾಗಾಗಿ ಈ ಒಂಟಿ ಆನೆಯನ್ನು ಶೀಘ್ರವೇ ಸೆರೆ ಹಿಡಿದು ಬೇರೆ ಕಡೆ ಸ್ಥಳಾಂತರಿಸಬೇಕೆಂದು ಸಂಸದರಲ್ಲಿ ಮನವಿ ಮಾಡಿದರು.</p>.<p>ಸಂಸದರು ಸ್ಥಳದ್ಲಲೇ ಇದ್ದ ಅರಣ್ಯ ಅಧಿಕಾರಿಗಳ ಜೊತೆ ಮಾತನಾಡಿ ಮನುಷ್ಯರ ಮೇಲೆ ದಾಳಿ ಮಾಡಿ, ಇಬ್ಬರು ರೈತರ ಸಾವಿಗೆ ಕಾರಣವಾಗಿರುವ ಈ ಆನೆಯು ಅಪಾಯಕಾರಿಯಾಗಿದೆ. ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>