<p><strong>ಚನ್ನಪಟ್ಟಣ (ರಾಮನಗರ):</strong> ‘ನಾನೂ ಕೂಡ ರಾಮಭಕ್ತನಾಗಿದ್ದು, ರಾಮನನ್ನು ಭಕ್ತಿಪೂರ್ವಕವಾಗಿ ಪೂಜೆ ಮಾಡುತ್ತೇನೆ. ಇದೇ ಕಾರಣಕ್ಕಾಗಿ, ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂಬ ಚಿಂತನೆ ಮಾಡಿದ್ದೆ. ಅದನ್ನೇ ಮಾಡೇ ಮಾಡುತ್ತೇನೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p><p>ರಾಮಮಂದಿರ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟ ಕುರಿತು ಪಟ್ಟಣದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಚಿಕ್ಕ ವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ’ ಎಂದರು.</p><p>‘ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಜನರನ್ನು ಒಡೆದಾಳುತ್ತಾ ರಾಜಕೀಯ ಮಾಡುತ್ತಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೊ ಏನೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿ ವಿಚಾರ. ಆದರೆ, ನಾವು ಹಾಗೆ ಮಾಡುವುದಿಲ್ಲ. ಕಾಂಗ್ರೆಸ್ಗೆ ತನ್ನದೇ ಆದ ಬದ್ಧತೆ ಮತ್ತು ಸಿದ್ದಾಂತವಿದೆ’ ಎಂದು ಹೇಳಿದರು.</p><p>‘ನಾವು ರಾಮನನ್ನು ಮನೆ ದೇವರು ಅಂತ ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿಯೇ, ಅವರು ರಾಮನನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ (ರಾಮನಗರ):</strong> ‘ನಾನೂ ಕೂಡ ರಾಮಭಕ್ತನಾಗಿದ್ದು, ರಾಮನನ್ನು ಭಕ್ತಿಪೂರ್ವಕವಾಗಿ ಪೂಜೆ ಮಾಡುತ್ತೇನೆ. ಇದೇ ಕಾರಣಕ್ಕಾಗಿ, ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂಬ ಚಿಂತನೆ ಮಾಡಿದ್ದೆ. ಅದನ್ನೇ ಮಾಡೇ ಮಾಡುತ್ತೇನೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p><p>ರಾಮಮಂದಿರ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟ ಕುರಿತು ಪಟ್ಟಣದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಚಿಕ್ಕ ವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ’ ಎಂದರು.</p><p>‘ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಜನರನ್ನು ಒಡೆದಾಳುತ್ತಾ ರಾಜಕೀಯ ಮಾಡುತ್ತಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೊ ಏನೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿ ವಿಚಾರ. ಆದರೆ, ನಾವು ಹಾಗೆ ಮಾಡುವುದಿಲ್ಲ. ಕಾಂಗ್ರೆಸ್ಗೆ ತನ್ನದೇ ಆದ ಬದ್ಧತೆ ಮತ್ತು ಸಿದ್ದಾಂತವಿದೆ’ ಎಂದು ಹೇಳಿದರು.</p><p>‘ನಾವು ರಾಮನನ್ನು ಮನೆ ದೇವರು ಅಂತ ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿಯೇ, ಅವರು ರಾಮನನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>