<h1>ಕನಕಪುರ: ‘ಉತ್ತರ ಕರ್ನಾಟಕದ ಅಭಿವೃದ್ಧಿ ಹೆಸರಿನಲ್ಲಿ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳು, 371 ಜೆ ವಿಶೇಷ ಕಾಯ್ದೆಯಿಂದ ದಕ್ಷಿಣ ಕರ್ನಾಟಕದ ಜನತೆಗೆ ಅನ್ಯಾಯ ಆಗುತ್ತಿದೆ’ ಎಂದು ಹಸಿರು ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ.ಕುಮಾರ್ ಆರೋಪಿಸಿದರು.</h1>.<h1>ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಹಾಗೂ ಹಸಿರು ಪ್ರತಿಷ್ಠಾನ ಮತ್ತು ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 371 ಜೆ ಕಾಯ್ದೆ ಕೈಬಿಡುವಂತೆ ಒತ್ತಾಯಿಸಿ ಬುಧವಾರ ಮನವಿ ಸಲ್ಲಿಸಿ ಮಾತನಾಡಿದರು.</h1>.<h1>ಸರ್ಕಾರವು ಉತ್ತರ ಕರ್ನಾಟಕದ ಜನತೆ ಅತ್ಯಂತ ಹಿಂದುಳಿದಿದ್ದಾರೆ ಎಂದು ಅವರ ಅಭಿವೃದ್ಧಿಗೆ 371 ಜೆ ವಿಶೇಷ ಕಾಯ್ದೆ ಜಾರಿಗೊಳಿಸಿದೆ. ಆದರೆ ಇದರಿಂದ ರಾಜ್ಯದ 7 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಯ ಜನತೆಗೆ ಎಲ್ಲಾ ಹಂತದಲ್ಲೂ ಅನ್ಯಾಯ ಆಗುತ್ತಿದೆ ಎಂದು ದೂರಿದರು.</h1>.<h1>ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ ಮಾತನಾಡಿ, ಆ ಭಾಗದ ಜನರಿಗೆ ಅವಕಾಶ ಕೊಡುವುದು ಬೇಡವೆಂದು ಹೇಳುವುದಿಲ್ಲ. ಆದರೆ ಅದರ ಹೆಸರಿನಲ್ಲಿ ರಾಜ್ಯದ 24 ಜಿಲ್ಲೆಯ ಜನತೆಗೆ ಅನ್ಯಾಯವಾಗುತ್ತಿದೆ. ಇದನ್ನು ಸರ್ಕಾರ ಗಮನಿಸಬೇಕಿದೆ ಎಂದರು.</h1>.<h1>ಸರ್ಕಾರಿ ಉದ್ಯೋಗ ಪಡೆಯುವುದರಲ್ಲಿ, ಶಿಕ್ಷಣ ಪಡೆಯುವುದರಲ್ಲಿ, ಉದ್ಯೋಗದಲ್ಲಿ ಮುಂಬಡ್ತಿ ಪಡೆಯುವುದರಲ್ಲಿ ಕಲ್ಯಾಣ ಕರ್ನಾಟಕದ ಜನತೆಗೆ ಮಾತ್ರ ಲಾಭವಾಗುತ್ತಿದೆ. ಉಳಿದ ಜಿಲ್ಲೆಯ ಜನತೆಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.</h1>.<h1>ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದಾಗಿನಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಸಾವಿರಾರು ಕೋಟಿ ಅನುದಾನವನ್ನು ಪ್ರತಿ ವರ್ಷ ಕೊಡಲಾಗುತ್ತಿದೆ. ಆದರೆ ಅಲ್ಲಿ ಶ್ರೀಮಂತರಾದವರೇ ಶ್ರೀಮಂತರಾಗುತ್ತಿದ್ದಾರೆ ಎಂದು ದೂರಿದರು.</h1>.<h1>ಹೈದರಾಬಾದ್ ಕರ್ನಾಟಕ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕ ಮಾಡುತ್ತಿರುವುದರಿಂದ ಕರ್ನಾಟಕದ ಇತರೆ ಭಾಗದ ಜನರಿಗೆ ಅನ್ಯಾಯವಾಗುತ್ತಿದೆ. ಅದೇ ರೀತಿ ಹುದ್ದೆಯಲ್ಲಿ ಬಡ್ತಿ ಕೊಡುತ್ತಿರುವುದರಿಂದ ಅನ್ಯಾಯವಾಗುತ್ತಿದೆ. ಈ ಅಸಮತೋಲನ ಸರಿಪಡಿಸಬೇಕೆಂದು ಒತ್ತಾಯಿಸಿದರು.</h1>.<h1>ಶಿಕ್ಷಣದಲ್ಲಿ ಮತ್ತು ಉದ್ಯೋಗದಲ್ಲಿ ಅರ್ಹತೆ ಮತ್ತು ಜ್ಯೇಷ್ಠತೆ ಮೇಲೆ ಅವಕಾಶ ಕಲ್ಪಿಸಬೇಕು. ಇದರ ವಿರುದ್ಧ ಸರ್ಕಾರಿ ನೌಕರರು ಧ್ವನಿ ಎತ್ತಬೇಕು. ಶಾಸಕರು, ಸಂಸದರು ಸದನದಲ್ಲಿ ಇದರ ಬಗ್ಗೆ ಮಾತನಾಡಿ ಅಸಮತೋಲನವನ್ನು ಸರಿಪಡಿಸಬೇಕಿದೆ ಎಂದು ಆಗ್ರಹಿಸಿದರು.</h1>.<h1>ಒತ್ತಾಯದ ಮನವಿ ಪತ್ರವನ್ನು ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಗ್ರೇಡ್ 2 ತಹಶೀಲ್ದಾರ್ ವಸಂತ ಮನವಿ ಸ್ವೀಕರಿಸಿದರು.</h1>.<h1>ಚಿಕ್ಕೆಂಪೇಗೌಡ, ನಾಗರಾಜು, ಕೂಗಿ ಗಿರಿಯಪ್ಪ, ಯು.ಎ.ಸ್ವಾಮಿಗೌಡ, ಕಾಂತರಾಜು, ಆನಮಾನಹಳ್ಳಿ ನಾಗರಾಜು, ಎಲ್ಲೇಗೌಡ ಬೆಸಗರಹಳ್ಳಿ, ಕೆ.ಆರ್.ಸುರೇಶ್, ಜೀರ್ಣಕುಪ್ಪೆ ರಾಜೇಶ್, ಚಿಕ್ಕರಂಗೆಗೌಡ, ಪ್ರಶಾಂತ್, ಅಜ್ಗರ್ ಖಾನ್, ಗಿರೀಶ್, ಚೀಲೂರು ಮುನಿರಾಜು, ನಲ್ಲಳ್ಳಿ ಶ್ರೀನಿವಾಸ್, ಶ್ರೀನಿವಾಸ್, ರವೀಶ್ ಗೌಡ, ವೇಣುಗೋಪಾಲ್, ಮಂಜುನಾಥ ರೆಡ್ಡಿ ಉಪಸ್ಥಿತರಿದ್ದರು.</h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h1>ಕನಕಪುರ: ‘ಉತ್ತರ ಕರ್ನಾಟಕದ ಅಭಿವೃದ್ಧಿ ಹೆಸರಿನಲ್ಲಿ ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳು, 371 ಜೆ ವಿಶೇಷ ಕಾಯ್ದೆಯಿಂದ ದಕ್ಷಿಣ ಕರ್ನಾಟಕದ ಜನತೆಗೆ ಅನ್ಯಾಯ ಆಗುತ್ತಿದೆ’ ಎಂದು ಹಸಿರು ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ.ಕುಮಾರ್ ಆರೋಪಿಸಿದರು.</h1>.<h1>ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಹಾಗೂ ಹಸಿರು ಪ್ರತಿಷ್ಠಾನ ಮತ್ತು ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 371 ಜೆ ಕಾಯ್ದೆ ಕೈಬಿಡುವಂತೆ ಒತ್ತಾಯಿಸಿ ಬುಧವಾರ ಮನವಿ ಸಲ್ಲಿಸಿ ಮಾತನಾಡಿದರು.</h1>.<h1>ಸರ್ಕಾರವು ಉತ್ತರ ಕರ್ನಾಟಕದ ಜನತೆ ಅತ್ಯಂತ ಹಿಂದುಳಿದಿದ್ದಾರೆ ಎಂದು ಅವರ ಅಭಿವೃದ್ಧಿಗೆ 371 ಜೆ ವಿಶೇಷ ಕಾಯ್ದೆ ಜಾರಿಗೊಳಿಸಿದೆ. ಆದರೆ ಇದರಿಂದ ರಾಜ್ಯದ 7 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಯ ಜನತೆಗೆ ಎಲ್ಲಾ ಹಂತದಲ್ಲೂ ಅನ್ಯಾಯ ಆಗುತ್ತಿದೆ ಎಂದು ದೂರಿದರು.</h1>.<h1>ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ ಮಾತನಾಡಿ, ಆ ಭಾಗದ ಜನರಿಗೆ ಅವಕಾಶ ಕೊಡುವುದು ಬೇಡವೆಂದು ಹೇಳುವುದಿಲ್ಲ. ಆದರೆ ಅದರ ಹೆಸರಿನಲ್ಲಿ ರಾಜ್ಯದ 24 ಜಿಲ್ಲೆಯ ಜನತೆಗೆ ಅನ್ಯಾಯವಾಗುತ್ತಿದೆ. ಇದನ್ನು ಸರ್ಕಾರ ಗಮನಿಸಬೇಕಿದೆ ಎಂದರು.</h1>.<h1>ಸರ್ಕಾರಿ ಉದ್ಯೋಗ ಪಡೆಯುವುದರಲ್ಲಿ, ಶಿಕ್ಷಣ ಪಡೆಯುವುದರಲ್ಲಿ, ಉದ್ಯೋಗದಲ್ಲಿ ಮುಂಬಡ್ತಿ ಪಡೆಯುವುದರಲ್ಲಿ ಕಲ್ಯಾಣ ಕರ್ನಾಟಕದ ಜನತೆಗೆ ಮಾತ್ರ ಲಾಭವಾಗುತ್ತಿದೆ. ಉಳಿದ ಜಿಲ್ಲೆಯ ಜನತೆಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.</h1>.<h1>ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದಾಗಿನಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಸಾವಿರಾರು ಕೋಟಿ ಅನುದಾನವನ್ನು ಪ್ರತಿ ವರ್ಷ ಕೊಡಲಾಗುತ್ತಿದೆ. ಆದರೆ ಅಲ್ಲಿ ಶ್ರೀಮಂತರಾದವರೇ ಶ್ರೀಮಂತರಾಗುತ್ತಿದ್ದಾರೆ ಎಂದು ದೂರಿದರು.</h1>.<h1>ಹೈದರಾಬಾದ್ ಕರ್ನಾಟಕ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕ ಮಾಡುತ್ತಿರುವುದರಿಂದ ಕರ್ನಾಟಕದ ಇತರೆ ಭಾಗದ ಜನರಿಗೆ ಅನ್ಯಾಯವಾಗುತ್ತಿದೆ. ಅದೇ ರೀತಿ ಹುದ್ದೆಯಲ್ಲಿ ಬಡ್ತಿ ಕೊಡುತ್ತಿರುವುದರಿಂದ ಅನ್ಯಾಯವಾಗುತ್ತಿದೆ. ಈ ಅಸಮತೋಲನ ಸರಿಪಡಿಸಬೇಕೆಂದು ಒತ್ತಾಯಿಸಿದರು.</h1>.<h1>ಶಿಕ್ಷಣದಲ್ಲಿ ಮತ್ತು ಉದ್ಯೋಗದಲ್ಲಿ ಅರ್ಹತೆ ಮತ್ತು ಜ್ಯೇಷ್ಠತೆ ಮೇಲೆ ಅವಕಾಶ ಕಲ್ಪಿಸಬೇಕು. ಇದರ ವಿರುದ್ಧ ಸರ್ಕಾರಿ ನೌಕರರು ಧ್ವನಿ ಎತ್ತಬೇಕು. ಶಾಸಕರು, ಸಂಸದರು ಸದನದಲ್ಲಿ ಇದರ ಬಗ್ಗೆ ಮಾತನಾಡಿ ಅಸಮತೋಲನವನ್ನು ಸರಿಪಡಿಸಬೇಕಿದೆ ಎಂದು ಆಗ್ರಹಿಸಿದರು.</h1>.<h1>ಒತ್ತಾಯದ ಮನವಿ ಪತ್ರವನ್ನು ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಗ್ರೇಡ್ 2 ತಹಶೀಲ್ದಾರ್ ವಸಂತ ಮನವಿ ಸ್ವೀಕರಿಸಿದರು.</h1>.<h1>ಚಿಕ್ಕೆಂಪೇಗೌಡ, ನಾಗರಾಜು, ಕೂಗಿ ಗಿರಿಯಪ್ಪ, ಯು.ಎ.ಸ್ವಾಮಿಗೌಡ, ಕಾಂತರಾಜು, ಆನಮಾನಹಳ್ಳಿ ನಾಗರಾಜು, ಎಲ್ಲೇಗೌಡ ಬೆಸಗರಹಳ್ಳಿ, ಕೆ.ಆರ್.ಸುರೇಶ್, ಜೀರ್ಣಕುಪ್ಪೆ ರಾಜೇಶ್, ಚಿಕ್ಕರಂಗೆಗೌಡ, ಪ್ರಶಾಂತ್, ಅಜ್ಗರ್ ಖಾನ್, ಗಿರೀಶ್, ಚೀಲೂರು ಮುನಿರಾಜು, ನಲ್ಲಳ್ಳಿ ಶ್ರೀನಿವಾಸ್, ಶ್ರೀನಿವಾಸ್, ರವೀಶ್ ಗೌಡ, ವೇಣುಗೋಪಾಲ್, ಮಂಜುನಾಥ ರೆಡ್ಡಿ ಉಪಸ್ಥಿತರಿದ್ದರು.</h1>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>