<p>ಕನಕಪುರ: ತಾಲ್ಲೂಕಿನ ಕಬ್ಬಾಳು ಅರಣ್ಯ ಪ್ರದೇಶದಲ್ಲಿ ಕಾಡಾನೆಗಳನ್ನು ವನ್ಯಜೀವಿ ಅರಣ್ಯ ಪ್ರದೇಶ ಮುತ್ತತ್ತಿಗೆ ಓಡಿಸಲು ಅರಣ್ಯ ಇಲಾಖೆ ಸಾಕಿದ ಆನೆಗಳ ಮೂಲಕ ಕಾರ್ಯಾಚರಣೆಗೆ ಗುರುವಾರ ಚಾಲನೆ ನೀಡಿದರು.</p>.<p>ಕಬ್ಬಾಳು ಅರಣ್ಯ ಪ್ರದೇಶ ಸೇರಿದಂತೆ ತೆಂಗಿನಕಲ್ಲು ಬೆಟ್ಟ, ಚನ್ನಪಟ್ಟಣದಲ್ಲಿ ಸುಮಾರು 25 ಕಾಡಾನೆಗಳು ಸೇರಿಕೊಂಡಿವೆ. ನಿರಂತರವಾಗಿ ರೈತರ ಜಮೀನು ಮೇಲೆ ದಾಳಿ ಮಾಡಿ ರೈತರ ಫಸಲು ನಾಶ ಮಾಡುತ್ತಿದ್ದವು. ಇದು ರೈತರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆ ನೋವಾಗಿತ್ತು.</p>.<p>ಈ ಭಾಗದಲ್ಲಿ ಸೇರಿಕೊಂಡು ರೈತರಿಗೆ ತೊಂದರೆ ಕೊಡುವುದಲ್ಲದೆ ಜೀವ ಹಾನಿಗೆ ಕಾರಣವಾಗಿರುವ ಕಾಡಾನೆಗಳನ್ನು ಶಾಶ್ವತವಾಗಿ ಕಾಡಿಗೆ ಓಡಿಸಬೇಕೆಂದು ರೈತರು ಒತ್ತಾಯಿಸಿ ಹಲವು ಭಾರಿ ಪ್ರತಿಭಟನೆ ನಡೆಸಿದ್ದರು.</p>.<p>ರೈತರ ಒತ್ತಾಯಕ್ಕೆ ಮಣಿದಿರುವ ಅರಣ್ಯ ಇಲಾಖೆ ಸಾತನೂರು ವಲಯ, ಚನ್ನಪಟ್ಟಣ ವಲಯ, ರಾಮನಗರ ವಲಯದ ಮೂವರು ಅಧಿಕಾರಿಗಳು ಗುರುವಾರ ಏಳು ಸಾಕಿದ ಆನೆಗಳನ್ನು ಕರೆತಂದು ಕಾಡಾನೆ ಓಡಿಸುವ ಕಾರ್ಯಾಚರಣೆಗೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಕಬ್ಬಾಳು ಅರಣ್ಯ ಪ್ರದೇಶದಲ್ಲಿ ಕಾಡಾನೆಗಳನ್ನು ವನ್ಯಜೀವಿ ಅರಣ್ಯ ಪ್ರದೇಶ ಮುತ್ತತ್ತಿಗೆ ಓಡಿಸಲು ಅರಣ್ಯ ಇಲಾಖೆ ಸಾಕಿದ ಆನೆಗಳ ಮೂಲಕ ಕಾರ್ಯಾಚರಣೆಗೆ ಗುರುವಾರ ಚಾಲನೆ ನೀಡಿದರು.</p>.<p>ಕಬ್ಬಾಳು ಅರಣ್ಯ ಪ್ರದೇಶ ಸೇರಿದಂತೆ ತೆಂಗಿನಕಲ್ಲು ಬೆಟ್ಟ, ಚನ್ನಪಟ್ಟಣದಲ್ಲಿ ಸುಮಾರು 25 ಕಾಡಾನೆಗಳು ಸೇರಿಕೊಂಡಿವೆ. ನಿರಂತರವಾಗಿ ರೈತರ ಜಮೀನು ಮೇಲೆ ದಾಳಿ ಮಾಡಿ ರೈತರ ಫಸಲು ನಾಶ ಮಾಡುತ್ತಿದ್ದವು. ಇದು ರೈತರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆ ನೋವಾಗಿತ್ತು.</p>.<p>ಈ ಭಾಗದಲ್ಲಿ ಸೇರಿಕೊಂಡು ರೈತರಿಗೆ ತೊಂದರೆ ಕೊಡುವುದಲ್ಲದೆ ಜೀವ ಹಾನಿಗೆ ಕಾರಣವಾಗಿರುವ ಕಾಡಾನೆಗಳನ್ನು ಶಾಶ್ವತವಾಗಿ ಕಾಡಿಗೆ ಓಡಿಸಬೇಕೆಂದು ರೈತರು ಒತ್ತಾಯಿಸಿ ಹಲವು ಭಾರಿ ಪ್ರತಿಭಟನೆ ನಡೆಸಿದ್ದರು.</p>.<p>ರೈತರ ಒತ್ತಾಯಕ್ಕೆ ಮಣಿದಿರುವ ಅರಣ್ಯ ಇಲಾಖೆ ಸಾತನೂರು ವಲಯ, ಚನ್ನಪಟ್ಟಣ ವಲಯ, ರಾಮನಗರ ವಲಯದ ಮೂವರು ಅಧಿಕಾರಿಗಳು ಗುರುವಾರ ಏಳು ಸಾಕಿದ ಆನೆಗಳನ್ನು ಕರೆತಂದು ಕಾಡಾನೆ ಓಡಿಸುವ ಕಾರ್ಯಾಚರಣೆಗೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>