<p><strong>ಮಾಗಡಿ</strong>: ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ನೀವು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ ಇದ್ದಾರೆ. ಅವರು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಪೂಜಾರಿ ಪರವಾಗಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ ವಾಗ್ದಾಳಿ ನಡೆಸಿದರು.</p><p>ಪಟ್ಟಣದಲ್ಲಿ ಶುಕ್ರವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ನಾವು ರಾಮಭಕ್ತರು ನಮ್ಮನ್ನೂ ಬಂಧನ ಮಾಡಿ ಎನ್ನುತ್ತಿರುವ ಬಿಜೆಪಿ ನಾಯಕರ ಮೇಲೆ ಕೇಸ್ ಇದ್ದರೆ ಪೊಲೀಸರು ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಾರೆ. ಅವರನ್ನೇನು ಬಿಟ್ಟು ಬಿಡೋದಿಲ್ಲ.</p><p>ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಆರ್. ಅಶೋಕಗೂ ಒಂದೇ ಕಾನೂನು, ಪರಮೇಶ್ವರಗೂ ಒಂದೇ ಕಾನೂನು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗುತ್ತದೆ ಎಂದರು.</p><p>ರಾಮಮಂದಿರ ಉದ್ಘಾಟನೆ ದಿನ ರಜೆ ಘೋಷಣೆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಂದಿನ ಸಿ.ಎಂ ಪರಮೇಶ್ವರ್ ಎಂದು ಘೋಷಣೆ ಕೂಗಿದರು. ಆಗ ಪರಮೇಶ್ವರ್ ಅವರು, ಮೈಕ್ ಕಿತ್ತುಕೊಂಡು ಸುಮ್ಮನಾಗಿಸಿದರು.</p><p>ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ, ಜೆಡಿಎಸ್ ಮುಖಂಡ ಎ. ಮಂಜುನಾಥ್ ಹಾಗೂ ಸ್ಥಳೀಯ ಮುಖಂಡರು ಇದ್ದರು.</p>.ಇಡೀ ದೇಶ ರಾಮಮಯ, ಕಾಂಗ್ರೆಸ್ಗೆ ಹೊಟ್ಟೆಕಿಚ್ಚು: ಪ್ರಮೋದ್ ಮುತಾಲಿಕ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ನೀವು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ ಇದ್ದಾರೆ. ಅವರು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಪೂಜಾರಿ ಪರವಾಗಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ ವಾಗ್ದಾಳಿ ನಡೆಸಿದರು.</p><p>ಪಟ್ಟಣದಲ್ಲಿ ಶುಕ್ರವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ನಾವು ರಾಮಭಕ್ತರು ನಮ್ಮನ್ನೂ ಬಂಧನ ಮಾಡಿ ಎನ್ನುತ್ತಿರುವ ಬಿಜೆಪಿ ನಾಯಕರ ಮೇಲೆ ಕೇಸ್ ಇದ್ದರೆ ಪೊಲೀಸರು ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಾರೆ. ಅವರನ್ನೇನು ಬಿಟ್ಟು ಬಿಡೋದಿಲ್ಲ.</p><p>ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಆರ್. ಅಶೋಕಗೂ ಒಂದೇ ಕಾನೂನು, ಪರಮೇಶ್ವರಗೂ ಒಂದೇ ಕಾನೂನು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗುತ್ತದೆ ಎಂದರು.</p><p>ರಾಮಮಂದಿರ ಉದ್ಘಾಟನೆ ದಿನ ರಜೆ ಘೋಷಣೆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಂದಿನ ಸಿ.ಎಂ ಪರಮೇಶ್ವರ್ ಎಂದು ಘೋಷಣೆ ಕೂಗಿದರು. ಆಗ ಪರಮೇಶ್ವರ್ ಅವರು, ಮೈಕ್ ಕಿತ್ತುಕೊಂಡು ಸುಮ್ಮನಾಗಿಸಿದರು.</p><p>ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ, ಜೆಡಿಎಸ್ ಮುಖಂಡ ಎ. ಮಂಜುನಾಥ್ ಹಾಗೂ ಸ್ಥಳೀಯ ಮುಖಂಡರು ಇದ್ದರು.</p>.ಇಡೀ ದೇಶ ರಾಮಮಯ, ಕಾಂಗ್ರೆಸ್ಗೆ ಹೊಟ್ಟೆಕಿಚ್ಚು: ಪ್ರಮೋದ್ ಮುತಾಲಿಕ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>