<p><strong>ರಾಮನಗರ:</strong> ನಗರದಿಂದ ಬೆಂಗಳೂರಿಗೆ ಹೋಗಲು ಬೆಳಿಗ್ಗೆ ಒಂದು ಗಂಟೆಯಾದರೂ ಕೆಎಸ್ಆರ್ಟಿಸಿ ಬಸ್ಗಳು ಸರಿಯಾಗಿ ಬಾರದಿದ್ದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಇಲ್ಲಿನ ಬಸ್ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕೆಲಸಕ್ಕೆ ಹೋಗುವ ಉದ್ಯೋಗಿಗಳು, ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರು ಬೆಳಿಗ್ಗೆ 7ರಿಂದಲೇ ನಿಲ್ದಾಣದಲ್ಲಿ ಜಮಾಯಿಸಿದ್ದರು. ಸಮಯಕ್ಕೆ ಸರಿಯಾಗಿ ಬಸ್ಗಳು ಬರಲಿಲ್ಲ. ಕಾದು ಹೈರಾಣಾದ ಪ್ರಯಾಣಿಕರು ಪ್ರತಿಭಟನೆ ಆರಂಭಿಸಿದರು. </p><p>ಆಗಷ್ಟೇ ಬಂದ ಹತ್ತಲು ಜಾಗವಿಲ್ಲದಂತೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಸ್ಸು ತಡೆದು ಆಕ್ರೋಶ ಹೊರಹಾಕಿದರು. ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p><p>ರಾಮನಗರಕ್ಕೆ ಮೈಸೂರು ಕಡೆಯಿಂದ ಬರುವ ಬಸ್ಗಳು ಕಿಕ್ಕಿರಿದು ತುಂಬಿದ್ದು ರಾಮನಗರದಲ್ಲಿ ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ, ಸಮಸ್ಯೆ ಬಗೆಹರಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. </p><p>ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಬಸ್ ತಡೆಯದಂತೆ ಉದ್ರಿಕ್ತ ಪ್ರಯಾಣಿಕರ ಮನವೊಲಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ, ಸಂಚಾರ ಠಾಣೆ ಪಿಎಸ್ಐ ಅಲ್ಲಾವುದ್ದೀನ್ ಅವರು ಪ್ರಯಾಣಿಕರನ್ನು ಸಮಾಧಾನಪಡಿಸಿದರು. ನಂತರ ಜನರು ಪ್ರತಿಭಟನೆ ನಿಲ್ಲಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಗರದಿಂದ ಬೆಂಗಳೂರಿಗೆ ಹೋಗಲು ಬೆಳಿಗ್ಗೆ ಒಂದು ಗಂಟೆಯಾದರೂ ಕೆಎಸ್ಆರ್ಟಿಸಿ ಬಸ್ಗಳು ಸರಿಯಾಗಿ ಬಾರದಿದ್ದರಿಂದ ಆಕ್ರೋಶಗೊಂಡ ಪ್ರಯಾಣಿಕರು, ಇಲ್ಲಿನ ಬಸ್ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕೆಲಸಕ್ಕೆ ಹೋಗುವ ಉದ್ಯೋಗಿಗಳು, ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರು ಬೆಳಿಗ್ಗೆ 7ರಿಂದಲೇ ನಿಲ್ದಾಣದಲ್ಲಿ ಜಮಾಯಿಸಿದ್ದರು. ಸಮಯಕ್ಕೆ ಸರಿಯಾಗಿ ಬಸ್ಗಳು ಬರಲಿಲ್ಲ. ಕಾದು ಹೈರಾಣಾದ ಪ್ರಯಾಣಿಕರು ಪ್ರತಿಭಟನೆ ಆರಂಭಿಸಿದರು. </p><p>ಆಗಷ್ಟೇ ಬಂದ ಹತ್ತಲು ಜಾಗವಿಲ್ಲದಂತೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಸ್ಸು ತಡೆದು ಆಕ್ರೋಶ ಹೊರಹಾಕಿದರು. ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p><p>ರಾಮನಗರಕ್ಕೆ ಮೈಸೂರು ಕಡೆಯಿಂದ ಬರುವ ಬಸ್ಗಳು ಕಿಕ್ಕಿರಿದು ತುಂಬಿದ್ದು ರಾಮನಗರದಲ್ಲಿ ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ, ಸಮಸ್ಯೆ ಬಗೆಹರಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. </p><p>ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಬಸ್ ತಡೆಯದಂತೆ ಉದ್ರಿಕ್ತ ಪ್ರಯಾಣಿಕರ ಮನವೊಲಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ, ಸಂಚಾರ ಠಾಣೆ ಪಿಎಸ್ಐ ಅಲ್ಲಾವುದ್ದೀನ್ ಅವರು ಪ್ರಯಾಣಿಕರನ್ನು ಸಮಾಧಾನಪಡಿಸಿದರು. ನಂತರ ಜನರು ಪ್ರತಿಭಟನೆ ನಿಲ್ಲಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>