<h4>ಕನಕಪುರ: ನಗರದ ಸುತ್ತಮುತ್ತ ಕಂಡುಬಂದ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ಹಲವೆಡೆ ಬೋನು ಇಟ್ಟಿದ್ದಾರೆ. </h4><h4>ನಗರದ ಮೆಳೆಕೋಟೆ, ಗಿರೀಶ್ ಕಲ್ಯಾಣ ಮಂಟಪದ ಹಿಂಭಾಗದ ನಿರ್ವಾಣೇಶ್ವರ ನಗರದಲ್ಲಿ ಚಿರತೆ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿತ್ತು. ಇದರಿಂದ ನಗರದ ಜನತೆ ಭಯಭೀತರಾಗಿದ್ದಾರೆ.</h4><h4>ಭಾನುವಾರ ನಗರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ನಡೆಸಿದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ನಿರ್ವಾಣೇಶ್ವರ ನಗರ ಮತ್ತು ಮೆಳೆಕೋಟೆ ಜನತೆ ಮತ್ತು ಆ ವಾರ್ಡಿನ ನಗರಸಭೆ ಸದಸ್ಯರು ತಮ್ಮ ಬಡಾವಣೆಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುವಂತೆ ಅರಣ್ಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದರು. </h4>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h4>ಕನಕಪುರ: ನಗರದ ಸುತ್ತಮುತ್ತ ಕಂಡುಬಂದ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ಹಲವೆಡೆ ಬೋನು ಇಟ್ಟಿದ್ದಾರೆ. </h4><h4>ನಗರದ ಮೆಳೆಕೋಟೆ, ಗಿರೀಶ್ ಕಲ್ಯಾಣ ಮಂಟಪದ ಹಿಂಭಾಗದ ನಿರ್ವಾಣೇಶ್ವರ ನಗರದಲ್ಲಿ ಚಿರತೆ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿತ್ತು. ಇದರಿಂದ ನಗರದ ಜನತೆ ಭಯಭೀತರಾಗಿದ್ದಾರೆ.</h4><h4>ಭಾನುವಾರ ನಗರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ನಡೆಸಿದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ನಿರ್ವಾಣೇಶ್ವರ ನಗರ ಮತ್ತು ಮೆಳೆಕೋಟೆ ಜನತೆ ಮತ್ತು ಆ ವಾರ್ಡಿನ ನಗರಸಭೆ ಸದಸ್ಯರು ತಮ್ಮ ಬಡಾವಣೆಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುವಂತೆ ಅರಣ್ಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದರು. </h4>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>