<p><strong>ಕನಕಪುರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶವು ಜನರ ನಿರೀಕ್ಷೆಗೂ ಮೀರಿ ಬಂದಿದೆ. ಇದಕ್ಕೆ ಕ್ಷೇತ್ರದ ಮತದಾರರೇ ಕಾರಣ ಎಂದು ರಾಮನಗರ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ತಿಳಿಸಿದರು.</p>.<p>ನಗರದ ಕೋಟೆ ಬಸವ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಶ್ರಮಿಸಿದ ಹಾಗೂ ಮತ ನೀಡಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.</p>.<p>ಸಂಸದರು ತಮ್ಮ ನಡವಳಿಕೆ ಹಾಗೂ ಅವರ ಹಿಂಬಾಲಕರಿಂದ ಇಂದು ಅವರು ಸೋತಿದ್ದಾರೆ. ಅವರ ದರ್ಪ ಮತ್ತು ಅಹಂಕಾರದಿಂದ ಬೇಸತ್ತ ಜನರು ಡಾಕ್ಟರ್ಗೆ ಮತ ನೀಡಿದ್ದಾರೆ ಎಂದರು.</p>.<p>ನಗರ ಮಂಡಲ ಅಧ್ಯಕ್ಷ ಕೋಟೆ ಮಂಜುನಾಥ್ ಮಾತನಾಡಿ, ಡಾ.ಮಂಜುನಾಥ್ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿ, ದಾಖಲೆ ನಿರ್ಮಿಸಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮಿ, ಕಾರ್ಯದರ್ಶಿ ಶ್ರೀವಲ್ಲಿ, ಕೋಟೆ ಕಿಟ್ಟಿ, ದಯಾನಂದ್, ಡಿ.ಶ್ರೀನಿವಾಸ್, ಕೃಷ್ಣಪ್ಪ, ಪವಿತ್ರಾ, ರೂಪಶ್ರೀ, ರವಿಕುಮಾರ್, ಹರೀಶ್, ಸಾಂಬಶಿವನ್, ಗೋಪಾಲ, ಸ್ವಾಮಿಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶವು ಜನರ ನಿರೀಕ್ಷೆಗೂ ಮೀರಿ ಬಂದಿದೆ. ಇದಕ್ಕೆ ಕ್ಷೇತ್ರದ ಮತದಾರರೇ ಕಾರಣ ಎಂದು ರಾಮನಗರ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ತಿಳಿಸಿದರು.</p>.<p>ನಗರದ ಕೋಟೆ ಬಸವ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಶ್ರಮಿಸಿದ ಹಾಗೂ ಮತ ನೀಡಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.</p>.<p>ಸಂಸದರು ತಮ್ಮ ನಡವಳಿಕೆ ಹಾಗೂ ಅವರ ಹಿಂಬಾಲಕರಿಂದ ಇಂದು ಅವರು ಸೋತಿದ್ದಾರೆ. ಅವರ ದರ್ಪ ಮತ್ತು ಅಹಂಕಾರದಿಂದ ಬೇಸತ್ತ ಜನರು ಡಾಕ್ಟರ್ಗೆ ಮತ ನೀಡಿದ್ದಾರೆ ಎಂದರು.</p>.<p>ನಗರ ಮಂಡಲ ಅಧ್ಯಕ್ಷ ಕೋಟೆ ಮಂಜುನಾಥ್ ಮಾತನಾಡಿ, ಡಾ.ಮಂಜುನಾಥ್ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿ, ದಾಖಲೆ ನಿರ್ಮಿಸಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮಿ, ಕಾರ್ಯದರ್ಶಿ ಶ್ರೀವಲ್ಲಿ, ಕೋಟೆ ಕಿಟ್ಟಿ, ದಯಾನಂದ್, ಡಿ.ಶ್ರೀನಿವಾಸ್, ಕೃಷ್ಣಪ್ಪ, ಪವಿತ್ರಾ, ರೂಪಶ್ರೀ, ರವಿಕುಮಾರ್, ಹರೀಶ್, ಸಾಂಬಶಿವನ್, ಗೋಪಾಲ, ಸ್ವಾಮಿಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>