ಮಾಗಡಿ: ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜಿಲ್ಲಾ ಜೆಡಿಎಸ್ ಯುವ ಕಾರ್ಯಾಧ್ಯಕ್ಷ ಎಸ್.ವಿ.ಟಿ ವೆಂಕಟೇಶ್ ಎಂಬುವವರು ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಕೆಂಪೇಗೌಡ ದೂರು ನೀಡಿದ್ದಾರೆ.
ಈಚೆಗೆ ಶಾಸಕ ಬಾಲಕೃಷ್ಣ ತಮ್ಮ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವೇಳೆ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡಿದ್ದರು. ಇದರ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು.
ಇದಕ್ಕೆ ಪ್ರತಿಯಾಗಿ ಎಸ್.ವಿ.ಟಿ ವೆಂಕಟೇಶ್, ಶಾಸಕ ಬಾಲಕೃಷ್ಣ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದರಿಂದ ಅಭಿಮಾನಿಗಳು, ಅವರ ಬೆಂಬಲಿಗರಿಗೆ ಅಪಾರ ನೋವು ಆಗಿದೆ ಎಂದು ದೂರಿದ್ದಾರೆ.