<p><strong>ಮಾಗಡಿ:</strong> ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಗುರುವಾರ ಶಿವಗಂಗೆಯ ಮೂಡಲ ಗಣಪತಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು.</p>.<p>ಶ್ರೀಗಿರಿಪುರ, ಕುದೂರು, ತಿಪ್ಪಸಂದ್ರ, ಹೊಸಪಾಳ್ಯ, ಕಲ್ಯಾ, ಅಗಲಕೋಟೆಯಲ್ಲಿ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.</p>.<p>ಸಂಜೆ 7ಕ್ಕೆ ಪಟ್ಟಣದ ಕಲ್ಯಾಬಾಗಿಲು ಮೂಲಕ ಮುಖ್ಯರಸ್ತೆಯಲ್ಲಿ ವಿವಿಧ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಕೆಂಪೇಗೌಡ ಬಯಲು ರಂಗಮಂದಿರ ತಲುಪಿದರು.</p>.<p>ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಡಾ.ಸಿ.ಎನ್.ಮಂಜುನಾಥ್, ‘ದೇಶದ ಸಮಗ್ರತೆ, ಏಕತೆ, ಅಭಿವೃದ್ದಿಗಾಗಿ ಬಿಜೆಪಿಗೆ ಮತ ಹಾಕಬೇಕು. ಎಚ್.ಡಿ.ದೇವೇಗೌಡ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ನನಗೆ ಮತ ನೀಡಬೇಕು’ ಎಂದು ಕೋರಿದರು.</p>.<p>‘ನಾನು 60ವರ್ಷಗಳ ಕಾಲ ಹೃದ್ರೋಗ ತಜ್ಞನಾಗಿ ಜಯದೇವ ಆಸ್ಪತ್ರೆಯಲ್ಲಿ ಲಕ್ಷಾಂತರ ರೋಗಿಗಳ ಸೇವೆ ಮಾಡಿದ್ದೇನೆ. ಸಾಧನೆಗಳು ಮಾತಾಗಬೇಕು. ಮೋದಿ ಸಾಧನೆಗಳನ್ನು ವಿಶ್ವ ಮೆಚ್ಚಿ ಕೊಂಡಾಡುತ್ತಿರುವುದರಿಂದ ಕೆಲವು ಟೀಕಿಸುತ್ತಿದ್ದಾರೆ. ಕಿತ್ತು ತಿನ್ನಬಾರದು, ಕೊಟ್ಟು ತಿನ್ನಬೇಕು’ ಎಂದರು.</p>.<p>ಮಾಜಿ ಶಾಸಕ ಎ.ಮಂಜುನಾಥ್ ಮಾತನಾಡಿ, ‘ಡಿ.ಕೆ.ಸುರೇಶ್ ನೋಟು ತೆಗೆದುಕೊಂಡು ಡಾ.ಸಿ.ಎನ್.ಮಂಜುನಾಥ್ ಅವರಿಗೆ ಓಟು ಹಾಕಿ’ ಎಂದರು.</p>.<p>ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಿದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಗುರುವಾರ ಶಿವಗಂಗೆಯ ಮೂಡಲ ಗಣಪತಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು.</p>.<p>ಶ್ರೀಗಿರಿಪುರ, ಕುದೂರು, ತಿಪ್ಪಸಂದ್ರ, ಹೊಸಪಾಳ್ಯ, ಕಲ್ಯಾ, ಅಗಲಕೋಟೆಯಲ್ಲಿ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.</p>.<p>ಸಂಜೆ 7ಕ್ಕೆ ಪಟ್ಟಣದ ಕಲ್ಯಾಬಾಗಿಲು ಮೂಲಕ ಮುಖ್ಯರಸ್ತೆಯಲ್ಲಿ ವಿವಿಧ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಕೆಂಪೇಗೌಡ ಬಯಲು ರಂಗಮಂದಿರ ತಲುಪಿದರು.</p>.<p>ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಡಾ.ಸಿ.ಎನ್.ಮಂಜುನಾಥ್, ‘ದೇಶದ ಸಮಗ್ರತೆ, ಏಕತೆ, ಅಭಿವೃದ್ದಿಗಾಗಿ ಬಿಜೆಪಿಗೆ ಮತ ಹಾಕಬೇಕು. ಎಚ್.ಡಿ.ದೇವೇಗೌಡ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ನನಗೆ ಮತ ನೀಡಬೇಕು’ ಎಂದು ಕೋರಿದರು.</p>.<p>‘ನಾನು 60ವರ್ಷಗಳ ಕಾಲ ಹೃದ್ರೋಗ ತಜ್ಞನಾಗಿ ಜಯದೇವ ಆಸ್ಪತ್ರೆಯಲ್ಲಿ ಲಕ್ಷಾಂತರ ರೋಗಿಗಳ ಸೇವೆ ಮಾಡಿದ್ದೇನೆ. ಸಾಧನೆಗಳು ಮಾತಾಗಬೇಕು. ಮೋದಿ ಸಾಧನೆಗಳನ್ನು ವಿಶ್ವ ಮೆಚ್ಚಿ ಕೊಂಡಾಡುತ್ತಿರುವುದರಿಂದ ಕೆಲವು ಟೀಕಿಸುತ್ತಿದ್ದಾರೆ. ಕಿತ್ತು ತಿನ್ನಬಾರದು, ಕೊಟ್ಟು ತಿನ್ನಬೇಕು’ ಎಂದರು.</p>.<p>ಮಾಜಿ ಶಾಸಕ ಎ.ಮಂಜುನಾಥ್ ಮಾತನಾಡಿ, ‘ಡಿ.ಕೆ.ಸುರೇಶ್ ನೋಟು ತೆಗೆದುಕೊಂಡು ಡಾ.ಸಿ.ಎನ್.ಮಂಜುನಾಥ್ ಅವರಿಗೆ ಓಟು ಹಾಕಿ’ ಎಂದರು.</p>.<p>ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಿದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>