<p><strong>ರಾಮನಗರ:</strong> ದೃಶ್ಯ ಮಾಧ್ಯಮದ ವ್ಯಾಮೋಹ ಹಾಗೂ ಧಾರಾವಾಹಿಗಳಿಗೆ ಜನರು ಹೆಚ್ಚು ಒತ್ತು ಕೊಡುತ್ತಿದ್ದು, ಪೌರಾಣಿಕ ನಾಟಕಗಳು ನಶಿಸುತ್ತಾ ಬಂದಿದೆ ಎಂದು ಮಂಡ್ಯ ಜಿಲ್ಲೆಯ ರಂಗ ನಿರ್ದೇಶಕ, ಹರಿಕಥೆ ವಿದ್ವಾಂಸ ವಿ.ಸಿ. ಗೋವಿಂದರಾಜು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ತಿಂಗಳ ಕಲಾ ಬೆಳಕು ಕಾರ್ಯಕ್ರಮದಲ್ಲಿ ‘ರಂಗ ಕಲಾಭೂಷಣ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.</p>.<p>ನಾಟಕ ಕಲೆ ಅದರಲ್ಲೂ ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸಿದಾಗ ಮನುಷ್ಯನ ಮನಸಿನ ಪರಿವರ್ತನೆ ಸಾಧ್ಯ. ಆಧುನಿಕ ಯುಗದಲ್ಲಿ ಕಲೆ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಪೌರಾಣಿಕ ನಾಟಕಗಳನ್ನು ಏರ್ಪಡಿಸುವ ಮೂಲಕ ಕಲೆಯನ್ನು ಪೋಷಿಸುವ ಕೆಲಸ ಮಾಡಬೇಕು ಎಂದರು.</p>.<p>ಶಾಂತಲಾ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಕವಿತಾ ರಾವ್ ಮಾತನಾಡಿ, ಟ್ರಸ್ಟ್ ಮೂಲಕ ಕಳೆದ 20 ವರ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ತಿಂಗಳ ಕಲಾ ಬೆಳಕು ಕಾರ್ಯಕ್ರಮದ ಮೂಲಕ ಕಲಾವಿದರನ್ನು ಗುರುತಿಸುವ ಜೊತೆಗೆ ಅವರಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.</p>.<p>ನಾಡಪ್ರಭು ಕೆಂಪೇಗೌಡ ಕಲಾ ಬಳಗದ ಗೌರವಾಧ್ಯಕ್ಷ ಶಂಭೂ ಗೌಡ, ರಂಗಭೂಮಿ ಕಲಾವಿದರಾದ ಅಬ್ದುಲ್ ಸಮದ್, ಸಂಪತ್ ಕುಮಾರ್, ಆದರ್ಶ ಸಿಂ.ಲಿಂ. ನಾಗರಾಜು, ತಬಲ ವಾದಕ ಮಹದೇವಚಾರ್, ಶಿಕ್ಷಕ ರಾಜಶೇಖರ್, ಗಾಯಕ ಮಹದೇವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ದೃಶ್ಯ ಮಾಧ್ಯಮದ ವ್ಯಾಮೋಹ ಹಾಗೂ ಧಾರಾವಾಹಿಗಳಿಗೆ ಜನರು ಹೆಚ್ಚು ಒತ್ತು ಕೊಡುತ್ತಿದ್ದು, ಪೌರಾಣಿಕ ನಾಟಕಗಳು ನಶಿಸುತ್ತಾ ಬಂದಿದೆ ಎಂದು ಮಂಡ್ಯ ಜಿಲ್ಲೆಯ ರಂಗ ನಿರ್ದೇಶಕ, ಹರಿಕಥೆ ವಿದ್ವಾಂಸ ವಿ.ಸಿ. ಗೋವಿಂದರಾಜು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ತಿಂಗಳ ಕಲಾ ಬೆಳಕು ಕಾರ್ಯಕ್ರಮದಲ್ಲಿ ‘ರಂಗ ಕಲಾಭೂಷಣ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.</p>.<p>ನಾಟಕ ಕಲೆ ಅದರಲ್ಲೂ ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸಿದಾಗ ಮನುಷ್ಯನ ಮನಸಿನ ಪರಿವರ್ತನೆ ಸಾಧ್ಯ. ಆಧುನಿಕ ಯುಗದಲ್ಲಿ ಕಲೆ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಪೌರಾಣಿಕ ನಾಟಕಗಳನ್ನು ಏರ್ಪಡಿಸುವ ಮೂಲಕ ಕಲೆಯನ್ನು ಪೋಷಿಸುವ ಕೆಲಸ ಮಾಡಬೇಕು ಎಂದರು.</p>.<p>ಶಾಂತಲಾ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಕವಿತಾ ರಾವ್ ಮಾತನಾಡಿ, ಟ್ರಸ್ಟ್ ಮೂಲಕ ಕಳೆದ 20 ವರ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ತಿಂಗಳ ಕಲಾ ಬೆಳಕು ಕಾರ್ಯಕ್ರಮದ ಮೂಲಕ ಕಲಾವಿದರನ್ನು ಗುರುತಿಸುವ ಜೊತೆಗೆ ಅವರಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.</p>.<p>ನಾಡಪ್ರಭು ಕೆಂಪೇಗೌಡ ಕಲಾ ಬಳಗದ ಗೌರವಾಧ್ಯಕ್ಷ ಶಂಭೂ ಗೌಡ, ರಂಗಭೂಮಿ ಕಲಾವಿದರಾದ ಅಬ್ದುಲ್ ಸಮದ್, ಸಂಪತ್ ಕುಮಾರ್, ಆದರ್ಶ ಸಿಂ.ಲಿಂ. ನಾಗರಾಜು, ತಬಲ ವಾದಕ ಮಹದೇವಚಾರ್, ಶಿಕ್ಷಕ ರಾಜಶೇಖರ್, ಗಾಯಕ ಮಹದೇವ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>