<p><strong>ಶಿವಮೊಗ್ಗ:</strong> ಕೇಂದ್ರ ಸಚಿವ ನಿತಿನ್ ಗಡ್ಕರಿ ಶೀಘ್ರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ ₹2,138 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.</p>.<p>ಸಚಿವರು ಇದೇ ವೇಳೆ ₹ 139 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಕಳಸವಳ್ಳಿ-ಸಿಗಂದೂರು ಸೇತುವೆಗೆ ಸಂಪರ್ಕ ರಸ್ತೆಗೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ. ಹಿನ್ನೀರು ಹೆಚ್ಚಿದ್ದರೂ, ಕಡಿಮೆ ಇದ್ದರೂ ಕಾಮಗಾರಿ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಗಡ್ಕರಿ ಅವರನ್ನೇ ಸ್ಥಳಕ್ಕೆ ಕರೆದೊಯ್ದು ಪರಿಶೀಲಿಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>ನೆಲ್ಲಿಸರ ಕ್ಯಾಂಪ್ನಿಂದ ತೀರ್ಥಹಳ್ಳಿವರೆಗೆ ಹಾಗೂ ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಿಂದ ತಾಳಗುಪ್ಪದವರೆಗೆ ದ್ವಿಪಥ ರಸ್ತೆಗಳನ್ನು ಚತುಷ್ಪಥ ರಸ್ತೆಗಳನ್ನಾಗಿ ವಿಸ್ತರಿಸುವ ಕಾಮಗಾರಿಗೆ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬೈಂದೂರು-ರಾಣೆಬೆನ್ನೂರು ವಿಭಾಗದಲ್ಲಿ ₹ 19.77 ಕೋಟಿ ವೆಚ್ಚದಲ್ಲಿ ಸೇತುವೆಗಳು, ಶಿವಮೊಗ್ಗ-ಮಂಗಳೂರು ರಸ್ತೆಯಲ್ಲಿ ತುಂಗಾ ನದಿ ಸೇತುವೆ, ಶಿವಮೊಗ್ಗ-ಚಿತ್ರದುರ್ಗ ನಡುವಿನ ರೈಲ್ವೆ ಮೇಲ್ಸೇತುವೆ (ಡಿಸೆಂಬರ್ ಅಂತ್ಯದೊಳಗೆ ಪೂರ್ಣ), ಶಿವಮೊಗ್ಗ ಬೈಪಾಸ್ನಲ್ಲಿ ತುಂಗಾನದಿಗೆ ಸೇತುವೆ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ಧವಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 265 ಬಿಎಸ್ಎನ್ಎಲ್ ಟವರ್ಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಲ್ಲಿ 100 ಟವರ್ಗಳನ್ನು 2024ರ ಏಪ್ರಿಲ್ನೊಳಗೆ ಅಳವಡಿಸುವಂತೆ ದೂರ ಸಂಪರ್ಕ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಜನವರಿಗೆ 15ರೊಳಗೆ ರಾತ್ರಿಯಲ್ಲೂ ವಿಮಾನ ಇಳಿಸಲು ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗುವುದು. ವಿಮಾನ ನಿಲ್ದಾಣದಲ್ಲಿ ಮಂಜು ಮುಸುಕಿದ ವಾತಾವರಣದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ವಿಳಂಬವಾಗುತ್ತಿದೆ. ಈ ಸಮಸ್ಯೆನು ಬಗೆಹರಿಸಲು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕೇಂದ್ರ ಸಚಿವ ನಿತಿನ್ ಗಡ್ಕರಿ ಶೀಘ್ರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ ₹2,138 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.</p>.<p>ಸಚಿವರು ಇದೇ ವೇಳೆ ₹ 139 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಕಳಸವಳ್ಳಿ-ಸಿಗಂದೂರು ಸೇತುವೆಗೆ ಸಂಪರ್ಕ ರಸ್ತೆಗೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ. ಹಿನ್ನೀರು ಹೆಚ್ಚಿದ್ದರೂ, ಕಡಿಮೆ ಇದ್ದರೂ ಕಾಮಗಾರಿ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಗಡ್ಕರಿ ಅವರನ್ನೇ ಸ್ಥಳಕ್ಕೆ ಕರೆದೊಯ್ದು ಪರಿಶೀಲಿಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>ನೆಲ್ಲಿಸರ ಕ್ಯಾಂಪ್ನಿಂದ ತೀರ್ಥಹಳ್ಳಿವರೆಗೆ ಹಾಗೂ ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಿಂದ ತಾಳಗುಪ್ಪದವರೆಗೆ ದ್ವಿಪಥ ರಸ್ತೆಗಳನ್ನು ಚತುಷ್ಪಥ ರಸ್ತೆಗಳನ್ನಾಗಿ ವಿಸ್ತರಿಸುವ ಕಾಮಗಾರಿಗೆ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬೈಂದೂರು-ರಾಣೆಬೆನ್ನೂರು ವಿಭಾಗದಲ್ಲಿ ₹ 19.77 ಕೋಟಿ ವೆಚ್ಚದಲ್ಲಿ ಸೇತುವೆಗಳು, ಶಿವಮೊಗ್ಗ-ಮಂಗಳೂರು ರಸ್ತೆಯಲ್ಲಿ ತುಂಗಾ ನದಿ ಸೇತುವೆ, ಶಿವಮೊಗ್ಗ-ಚಿತ್ರದುರ್ಗ ನಡುವಿನ ರೈಲ್ವೆ ಮೇಲ್ಸೇತುವೆ (ಡಿಸೆಂಬರ್ ಅಂತ್ಯದೊಳಗೆ ಪೂರ್ಣ), ಶಿವಮೊಗ್ಗ ಬೈಪಾಸ್ನಲ್ಲಿ ತುಂಗಾನದಿಗೆ ಸೇತುವೆ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ಧವಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 265 ಬಿಎಸ್ಎನ್ಎಲ್ ಟವರ್ಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಲ್ಲಿ 100 ಟವರ್ಗಳನ್ನು 2024ರ ಏಪ್ರಿಲ್ನೊಳಗೆ ಅಳವಡಿಸುವಂತೆ ದೂರ ಸಂಪರ್ಕ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಜನವರಿಗೆ 15ರೊಳಗೆ ರಾತ್ರಿಯಲ್ಲೂ ವಿಮಾನ ಇಳಿಸಲು ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗುವುದು. ವಿಮಾನ ನಿಲ್ದಾಣದಲ್ಲಿ ಮಂಜು ಮುಸುಕಿದ ವಾತಾವರಣದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ವಿಳಂಬವಾಗುತ್ತಿದೆ. ಈ ಸಮಸ್ಯೆನು ಬಗೆಹರಿಸಲು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>