<p><strong>ಶಿವಮೊಗ್ಗ</strong>: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ ಬಂದ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ <strong>ಶಿವಮೊಗ್ಗದ </strong>ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.</p><p>ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ವಾದ್ಯ ಮೇಳದೊಂದಿಗೆ ವಿಜಯೇಂದ್ರ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.</p><p>ಬಿ.ವೈ.ವಿಜಯೇಂದ್ರ ಬಿಜೆಪಿ ಕಚೇರಿಗೆ ಬಂದಾಗ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ಭಾರತ ಮಾತಾಕಿ ಜೈ ಘೋಷಣೆ ಮಾಡಿದರು.</p>.<p>ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ ಎಂದರು.</p><p>ಮುಂಬರುವ ಲೋಕಸಭಾ ಚುನಾವಣೆ ನಮ್ಮ ಎದುರಿನ ಸವಾಲಾಗಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕಿದೆ. ಇದಕ್ಕೆ ಪಕ್ಷದ ಎಲ್ಲ ನಾಯಕರು ಕೈ ಜೋಡಿಸಬೇಕಿದೆ ಎಂದರು.</p><p>ನಂತರ ಬಿ.ವೈ.ವಿಜಯೇಂದ್ರ ಅವರನ್ನು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಿಇಎಸ್ ಕಾಲೇಜು ಸಭಾಂಗಣಕ್ಕೆ ಕರೆದೊಯ್ಯಲಿದ್ದು, ಅಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ ಬಂದ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ <strong>ಶಿವಮೊಗ್ಗದ </strong>ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.</p><p>ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ವಾದ್ಯ ಮೇಳದೊಂದಿಗೆ ವಿಜಯೇಂದ್ರ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.</p><p>ಬಿ.ವೈ.ವಿಜಯೇಂದ್ರ ಬಿಜೆಪಿ ಕಚೇರಿಗೆ ಬಂದಾಗ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ಭಾರತ ಮಾತಾಕಿ ಜೈ ಘೋಷಣೆ ಮಾಡಿದರು.</p>.<p>ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ ಎಂದರು.</p><p>ಮುಂಬರುವ ಲೋಕಸಭಾ ಚುನಾವಣೆ ನಮ್ಮ ಎದುರಿನ ಸವಾಲಾಗಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕಿದೆ. ಇದಕ್ಕೆ ಪಕ್ಷದ ಎಲ್ಲ ನಾಯಕರು ಕೈ ಜೋಡಿಸಬೇಕಿದೆ ಎಂದರು.</p><p>ನಂತರ ಬಿ.ವೈ.ವಿಜಯೇಂದ್ರ ಅವರನ್ನು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಿಇಎಸ್ ಕಾಲೇಜು ಸಭಾಂಗಣಕ್ಕೆ ಕರೆದೊಯ್ಯಲಿದ್ದು, ಅಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>