<p><strong>ಕಾರ್ಗಲ್:</strong> ಸಮೀಪದ ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ ಮಾಡಿದ ಆರೋಪದ ಮೇಲೆ ಗುರುವಾರ ಮೂವರನ್ನು ಬಂಧಿಸಲಾಗಿದೆ. </p>.<p>ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದ ಅಂಬಾರಗೋಡ್ಲು ಹಿನ್ನೀರಿನ ದಡದಲ್ಲಿ ನಾಡ ಬಂದೂಕಿನಿಂದ ಜಿಂಕೆಯನ್ನು ಬುಧವಾರ ರಾತ್ರಿ ಹತ್ಯೆ ಮಾಡಿದ ಆರೋಪಿಗಳು, ಅದನ್ನು ಪಾಲು ಮಾಡಿಕೊಳ್ಳುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. </p>.<p>ವಲಯ ಅರಣ್ಯಾಧಿಕಾರಿ ಸಂಧ್ಯಾ, ಉಪ ವಲಯ ಅರಣ್ಯಾಧಿಕಾರಿ ಜಿ.ಕೆ. ಸುಧಾಕರ್, ವನಪಾಲಕರಾದ ಮಹೇಶ್ ಬಮ್ಮನಹಳ್ಳಿ ಅವರ ತಂಡ ಬೇಟೆಗಾರರನ್ನು ಬಂಧಿಸಿದೆ. ಗೆಣಸಿನಕುಣಿ ಸಾಕಳಲು ಗ್ರಾಮದ ಬಾಳೆಕೊಪ್ಪ ನಿವಾಸಿ ಸತೀಶ, ಆನಂದಪುರ ಯಡೇಹಳ್ಳಿ ಗ್ರಾಮದ ನಾಗರಾಜ ಮತ್ತು ಪ್ರಜ್ವಲ್ ಬಂಧಿತರು. </p>.<p>ಆರೋಪಿಗಳ ವಿರುದ್ಧ ವನ್ಯಜೀವಿ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ, ಜಿಂಕೆಯ ಚರ್ಮ, ತಲೆ ಮತ್ತು ನಾಡ ಬಂದೂಕು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಸಂಧ್ಯಾ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಗಲ್:</strong> ಸಮೀಪದ ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ ಮಾಡಿದ ಆರೋಪದ ಮೇಲೆ ಗುರುವಾರ ಮೂವರನ್ನು ಬಂಧಿಸಲಾಗಿದೆ. </p>.<p>ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದ ಅಂಬಾರಗೋಡ್ಲು ಹಿನ್ನೀರಿನ ದಡದಲ್ಲಿ ನಾಡ ಬಂದೂಕಿನಿಂದ ಜಿಂಕೆಯನ್ನು ಬುಧವಾರ ರಾತ್ರಿ ಹತ್ಯೆ ಮಾಡಿದ ಆರೋಪಿಗಳು, ಅದನ್ನು ಪಾಲು ಮಾಡಿಕೊಳ್ಳುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. </p>.<p>ವಲಯ ಅರಣ್ಯಾಧಿಕಾರಿ ಸಂಧ್ಯಾ, ಉಪ ವಲಯ ಅರಣ್ಯಾಧಿಕಾರಿ ಜಿ.ಕೆ. ಸುಧಾಕರ್, ವನಪಾಲಕರಾದ ಮಹೇಶ್ ಬಮ್ಮನಹಳ್ಳಿ ಅವರ ತಂಡ ಬೇಟೆಗಾರರನ್ನು ಬಂಧಿಸಿದೆ. ಗೆಣಸಿನಕುಣಿ ಸಾಕಳಲು ಗ್ರಾಮದ ಬಾಳೆಕೊಪ್ಪ ನಿವಾಸಿ ಸತೀಶ, ಆನಂದಪುರ ಯಡೇಹಳ್ಳಿ ಗ್ರಾಮದ ನಾಗರಾಜ ಮತ್ತು ಪ್ರಜ್ವಲ್ ಬಂಧಿತರು. </p>.<p>ಆರೋಪಿಗಳ ವಿರುದ್ಧ ವನ್ಯಜೀವಿ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ, ಜಿಂಕೆಯ ಚರ್ಮ, ತಲೆ ಮತ್ತು ನಾಡ ಬಂದೂಕು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಸಂಧ್ಯಾ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>