<p><strong>ಸಾಗರ: </strong>ತಾಲ್ಲೂಕಿನ ಮಾಸೂರು ಗ್ರಾಮದ ಸ.ನಂ.105ರಲ್ಲಿರುವ 7.15 ಎಕರೆ ಗೋಮಾಳ ಪ್ರದೇಶದ ಖಾತೆ ಪಹಣಿಯನ್ನು ಬೇರೊಬ್ಬರ ಹೆಸರಿಗೆ ಬದಲಿಸಿದ್ದು, ಇದನ್ನು ರದ್ದುಪಡಿಸದಿದ್ದರೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಮೆಳವರಿಗೆ ಗ್ರಾಮಸ್ಥರು ಬಹಿಷ್ಕರಿಸುತ್ತಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಮೆಳವರಿಗೆ ಎಚ್ಚರಿಸಿದ್ದಾರೆ.</p>.<p>1963-64ರಲ್ಲಿ ನಾರಾಯಣಪ್ಪ ಎಂಬುವವರಿಗೆ ಗೇರು ಬೇಸಾಯ ಮಾಡಬೇಕು ಎಂಬ ಷರತ್ತಿನ ಮೇಲೆ ಸ.ನಂ.105ರಲ್ಲಿರುವ ಭೂಮಿ ಮಂಜೂರಾಗಿತ್ತು. ಅವರು ಯಾವುದೆ ಬೇಸಾಯ ಮಾಡದೆ ಇರುವ ಕಾರಣ ಭೂಮಿಯನ್ನು ಸರ್ಕಾರಕ್ಕೆ ಮರಳಿಸಬೇಕು. ಆದರೆ ನಾರಾಯಣಪ್ಪ ಅವರು ತಮಗೆ ಈ ಭೂಮಿಯ ಮೇಲೆ ಹಕ್ಕು ಇದೆ ಎಂದು ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.</p>.<p>ಗ್ರಾಮದ ಗೋಮಾಳ ಭೂಮಿಯನ್ನು ಗ್ರಾಮಕ್ಕೆ ಉಳಿಸಿಕೊಳ್ಳಬೇಕು ಎಂಬುದು ಗ್ರಾಮಸ್ಥರ ಕಳಕಳಿಯಾಗಿದೆ. ಈ ಸಂಬಂಧ ನ್ಯಾಯ ಒದಗಿಸಿಕೊಡುವಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಬಳಿ ಹೋಗಿದ್ದರು. ಆದರೆ ಶಾಸಕರು ಅವರ ಮನವಿಗೆ ಸೂಕ್ತವಾಗಿ ಸ್ಪಂದಿಸದಿರುವುದು ಗ್ರಾಮಸ್ಥರಿಗೆ ನೋವು ತಂದಿದೆ ಎಂದರು.</p>.<p>ಕಾನೂನಿನ ನಿಯಮಗಳನ್ನು ಉಲ್ಲಂಘಿಸಿಯೂ ನಾರಾಯಣಪ್ಪ ಅವರು ಗೋಮಾಳ ಪ್ರದೇಶದ ಭೂಮಿಯನ್ನು ತಮ್ಮದಾಗಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಆದಾಗ್ಯೂ ತಾಲ್ಲೂಕು ಆಡಳಿತ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿ ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಪ್ರಮುಖರಾದ ವೆಂಕಟೇಶ್, ಸೋಮಶೇಖರ್, ಗಣಪತಿ, ನಾರಾಯಣಪ್ಪ, ಲೋಕೇಶ್, ಅಣ್ಣಪ್ಪ, ರಾಜಪ್ಪ, ವೀರಭದ್ರ, ರಮೇಶ್, ಕೆರಿಯಪ್ಪ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನ ಮಾಸೂರು ಗ್ರಾಮದ ಸ.ನಂ.105ರಲ್ಲಿರುವ 7.15 ಎಕರೆ ಗೋಮಾಳ ಪ್ರದೇಶದ ಖಾತೆ ಪಹಣಿಯನ್ನು ಬೇರೊಬ್ಬರ ಹೆಸರಿಗೆ ಬದಲಿಸಿದ್ದು, ಇದನ್ನು ರದ್ದುಪಡಿಸದಿದ್ದರೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಮೆಳವರಿಗೆ ಗ್ರಾಮಸ್ಥರು ಬಹಿಷ್ಕರಿಸುತ್ತಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಮೆಳವರಿಗೆ ಎಚ್ಚರಿಸಿದ್ದಾರೆ.</p>.<p>1963-64ರಲ್ಲಿ ನಾರಾಯಣಪ್ಪ ಎಂಬುವವರಿಗೆ ಗೇರು ಬೇಸಾಯ ಮಾಡಬೇಕು ಎಂಬ ಷರತ್ತಿನ ಮೇಲೆ ಸ.ನಂ.105ರಲ್ಲಿರುವ ಭೂಮಿ ಮಂಜೂರಾಗಿತ್ತು. ಅವರು ಯಾವುದೆ ಬೇಸಾಯ ಮಾಡದೆ ಇರುವ ಕಾರಣ ಭೂಮಿಯನ್ನು ಸರ್ಕಾರಕ್ಕೆ ಮರಳಿಸಬೇಕು. ಆದರೆ ನಾರಾಯಣಪ್ಪ ಅವರು ತಮಗೆ ಈ ಭೂಮಿಯ ಮೇಲೆ ಹಕ್ಕು ಇದೆ ಎಂದು ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.</p>.<p>ಗ್ರಾಮದ ಗೋಮಾಳ ಭೂಮಿಯನ್ನು ಗ್ರಾಮಕ್ಕೆ ಉಳಿಸಿಕೊಳ್ಳಬೇಕು ಎಂಬುದು ಗ್ರಾಮಸ್ಥರ ಕಳಕಳಿಯಾಗಿದೆ. ಈ ಸಂಬಂಧ ನ್ಯಾಯ ಒದಗಿಸಿಕೊಡುವಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಬಳಿ ಹೋಗಿದ್ದರು. ಆದರೆ ಶಾಸಕರು ಅವರ ಮನವಿಗೆ ಸೂಕ್ತವಾಗಿ ಸ್ಪಂದಿಸದಿರುವುದು ಗ್ರಾಮಸ್ಥರಿಗೆ ನೋವು ತಂದಿದೆ ಎಂದರು.</p>.<p>ಕಾನೂನಿನ ನಿಯಮಗಳನ್ನು ಉಲ್ಲಂಘಿಸಿಯೂ ನಾರಾಯಣಪ್ಪ ಅವರು ಗೋಮಾಳ ಪ್ರದೇಶದ ಭೂಮಿಯನ್ನು ತಮ್ಮದಾಗಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಆದಾಗ್ಯೂ ತಾಲ್ಲೂಕು ಆಡಳಿತ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿ ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಪ್ರಮುಖರಾದ ವೆಂಕಟೇಶ್, ಸೋಮಶೇಖರ್, ಗಣಪತಿ, ನಾರಾಯಣಪ್ಪ, ಲೋಕೇಶ್, ಅಣ್ಣಪ್ಪ, ರಾಜಪ್ಪ, ವೀರಭದ್ರ, ರಮೇಶ್, ಕೆರಿಯಪ್ಪ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>