ಶಿವಮೊಗ್ಗ: ‘ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ನನಗೆ ರಾಜ್ಯ ಘಟಕದ ಹೊಣೆ ವಹಿಸಿದ್ದಾರೆ. ನನ್ನನ್ನು ನಾನೇ ನಾಯಕ ಎಂದು ಎಲ್ಲಿಯೂ ಬಿಂಬಿಸಿಕೊಂಡಿಲ್ಲ. ಬದಲಿಗೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ವಹಿಸಿರುವ ಕೆಲಸ ಮಾಡುತ್ತಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.