<p><strong>ಸಾಗರ: ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024ನೇ ಶೈಕ್ಷಣಿಕ ಸಾಲಿಗೆ ನ್ಯಾಕ್ ಸಂಸ್ಥೆಯಿಂದ ಬಿ++ ಮಾನ್ಯತೆ ದೊರಕಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಎಚ್. ತಿಳಿಸಿದ್ದಾರೆ. </strong></p>.<p><strong>33 ವರ್ಷಗಳ ಹಿಂದೆ ಪ್ರಾರಂಭವಾದ ಕಾಲೇಜಿನಲ್ಲಿ 3,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿರುವ ಕಾಲೇಜನ್ನು ಗುರುತಿಸಿ ನ್ಯಾಕ್ ಸಂಸ್ಥೆ ವಿಶೇಷ ಮಾನ್ಯತೆ ನೀಡಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</strong></p>.<p><strong>ಕಾಲೇಜಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ. ಅಕ್ಕಪಕ್ಕದ ತಾಲ್ಲೂಕುಗಳಿಂದಲೂ ಈ ಕಾಲೇಜಿಗೆ ವಿದ್ಯಾರ್ಥಿನಿಯರು ದಾಖಲಾಗುತ್ತಿರುವುದು ಕಾಲೇಜಿನಲ್ಲಿ ದೊರಕುತ್ತಿರುವ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಎಂದರು.</strong></p>.<p><strong>ಉಪನ್ಯಾಸಕರಾದ ಎಸ್.ಶಿವಾನಂದ ಭಟ್, ಮಹಾವೀರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮೂಕಪ್ಪನಾಯ್ಕ, ಮಧುಮಾಲತಿ, ಎನ್.ಉಷಾ, ಎಲ್.ಚಂದ್ರಪ್ಪ, ರಂಜನ್ ಶೆಟ್ಟಿ, ವೈ.ವಿ.ಗೋಪಾಲಕೃಷ್ಣ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024ನೇ ಶೈಕ್ಷಣಿಕ ಸಾಲಿಗೆ ನ್ಯಾಕ್ ಸಂಸ್ಥೆಯಿಂದ ಬಿ++ ಮಾನ್ಯತೆ ದೊರಕಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಎಚ್. ತಿಳಿಸಿದ್ದಾರೆ. </strong></p>.<p><strong>33 ವರ್ಷಗಳ ಹಿಂದೆ ಪ್ರಾರಂಭವಾದ ಕಾಲೇಜಿನಲ್ಲಿ 3,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿರುವ ಕಾಲೇಜನ್ನು ಗುರುತಿಸಿ ನ್ಯಾಕ್ ಸಂಸ್ಥೆ ವಿಶೇಷ ಮಾನ್ಯತೆ ನೀಡಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</strong></p>.<p><strong>ಕಾಲೇಜಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ. ಅಕ್ಕಪಕ್ಕದ ತಾಲ್ಲೂಕುಗಳಿಂದಲೂ ಈ ಕಾಲೇಜಿಗೆ ವಿದ್ಯಾರ್ಥಿನಿಯರು ದಾಖಲಾಗುತ್ತಿರುವುದು ಕಾಲೇಜಿನಲ್ಲಿ ದೊರಕುತ್ತಿರುವ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಎಂದರು.</strong></p>.<p><strong>ಉಪನ್ಯಾಸಕರಾದ ಎಸ್.ಶಿವಾನಂದ ಭಟ್, ಮಹಾವೀರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮೂಕಪ್ಪನಾಯ್ಕ, ಮಧುಮಾಲತಿ, ಎನ್.ಉಷಾ, ಎಲ್.ಚಂದ್ರಪ್ಪ, ರಂಜನ್ ಶೆಟ್ಟಿ, ವೈ.ವಿ.ಗೋಪಾಲಕೃಷ್ಣ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>