<p><strong>ಶಿವಮೊಗ್ಗ:</strong> ’ನನ್ನ ಹೃದಯ ಬಗೆದರೆ ಅಲ್ಲಿ ಶ್ರೀರಾಮ ಹಾಗೂ ನರೇಂದ್ರ ಮೋದಿ ಕಾಣಸಿಗುತ್ತಾರೆ. ಯಡಿಯೂರಪ್ಪ ಅವರ ಎದೆ ಬಗೆದರೆ ಅಲ್ಲಿ ಅವರ ಮಕ್ಕಳು ಹಾಗೂ ಶೋಭಾ ಕರಂದ್ಲಾಜೆ ಕಾಣಿಸುತ್ತಾರೆ ಎಂದು ಕಾರ್ಯಕರ್ತರು ಮಾತಾಡಿಕೊಳ್ಳುತ್ತಾರೆ‘ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶುಕ್ರವಾರ ಇಲ್ಲಿ ಛೇಡಿಸಿದರು.</p><p>ಪುತ್ರ ಕಾಂತೇಶ ಅವರಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದಿರುವ ಕಾರಣಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದ ಈಶ್ವರಪ್ಪ, ತಾವು ಪಕ್ಷೇತರರಾಗಿ ಸ್ಪರ್ಧಿಸುವ ಕುರಿತು ಬೆಂಬಲಿಗರು, ಅಭಿಮಾನಿಗಳಿಂದ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದ ಬಳಿಕ ಪ್ರಕಟಿಸಿದರು. </p><p>‘ಪಕ್ಷೇತರರಾಗಿ ಸ್ಪರ್ಧಿಸಿದರೆ ಬಿಜೆಪಿಯಿಂದ ನೋಟಿಸ್ ಕೊಡಬಹುದು. ಇಲ್ಲವೇ ಉಚ್ಚಾಟನೆ ಮಾಡಬಹುದು. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಎರಡು ತಿಂಗಳಲ್ಲಿಯೇ ಮತ್ತೆ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p><p>ಭಾಷಣದ ಉದ್ದಕ್ಕೂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತ ರೀತಿ ಆಗಲಿದೆ. ಹೀಗಾಗಿ ಕಾಂತೇಶ ಅವರಿಗೇ ಹಾವೇರಿ ಕ್ಷೇತ್ರದಿಂದ ಮತ್ತೆ ಟಿಕೆಟ್ಗೆ ಪ್ರಯತ್ನಿಸೋಣ’ ಎಂದು ಕೆಲವು ಬೆಂಬಲಿಗರು ಸಲಹೆ ನೀಡಿದರು.</p><p>‘ಗೆಲ್ಲದಿದ್ದರೂ ಪರವಾಗಿಲ್ಲ. ಅನ್ಯಾಯ ಎಸಗಿದವರನ್ನು ಸೋಲಿಸುವ ಶಕ್ತಿ ನಿಮಗೆ ಇದೆ. ಚುನಾವಣೆಗೆ ನಿಂತುಕೊಳ್ಳಿ ಬೆಂಬಲಿಸುತ್ತೇವೆ’ ಎಂದು ಇನ್ನೂ ಕೆಲವರು ಹುರಿದುಂಬಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ’ನನ್ನ ಹೃದಯ ಬಗೆದರೆ ಅಲ್ಲಿ ಶ್ರೀರಾಮ ಹಾಗೂ ನರೇಂದ್ರ ಮೋದಿ ಕಾಣಸಿಗುತ್ತಾರೆ. ಯಡಿಯೂರಪ್ಪ ಅವರ ಎದೆ ಬಗೆದರೆ ಅಲ್ಲಿ ಅವರ ಮಕ್ಕಳು ಹಾಗೂ ಶೋಭಾ ಕರಂದ್ಲಾಜೆ ಕಾಣಿಸುತ್ತಾರೆ ಎಂದು ಕಾರ್ಯಕರ್ತರು ಮಾತಾಡಿಕೊಳ್ಳುತ್ತಾರೆ‘ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶುಕ್ರವಾರ ಇಲ್ಲಿ ಛೇಡಿಸಿದರು.</p><p>ಪುತ್ರ ಕಾಂತೇಶ ಅವರಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದಿರುವ ಕಾರಣಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದ ಈಶ್ವರಪ್ಪ, ತಾವು ಪಕ್ಷೇತರರಾಗಿ ಸ್ಪರ್ಧಿಸುವ ಕುರಿತು ಬೆಂಬಲಿಗರು, ಅಭಿಮಾನಿಗಳಿಂದ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದ ಬಳಿಕ ಪ್ರಕಟಿಸಿದರು. </p><p>‘ಪಕ್ಷೇತರರಾಗಿ ಸ್ಪರ್ಧಿಸಿದರೆ ಬಿಜೆಪಿಯಿಂದ ನೋಟಿಸ್ ಕೊಡಬಹುದು. ಇಲ್ಲವೇ ಉಚ್ಚಾಟನೆ ಮಾಡಬಹುದು. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಎರಡು ತಿಂಗಳಲ್ಲಿಯೇ ಮತ್ತೆ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p><p>ಭಾಷಣದ ಉದ್ದಕ್ಕೂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತ ರೀತಿ ಆಗಲಿದೆ. ಹೀಗಾಗಿ ಕಾಂತೇಶ ಅವರಿಗೇ ಹಾವೇರಿ ಕ್ಷೇತ್ರದಿಂದ ಮತ್ತೆ ಟಿಕೆಟ್ಗೆ ಪ್ರಯತ್ನಿಸೋಣ’ ಎಂದು ಕೆಲವು ಬೆಂಬಲಿಗರು ಸಲಹೆ ನೀಡಿದರು.</p><p>‘ಗೆಲ್ಲದಿದ್ದರೂ ಪರವಾಗಿಲ್ಲ. ಅನ್ಯಾಯ ಎಸಗಿದವರನ್ನು ಸೋಲಿಸುವ ಶಕ್ತಿ ನಿಮಗೆ ಇದೆ. ಚುನಾವಣೆಗೆ ನಿಂತುಕೊಳ್ಳಿ ಬೆಂಬಲಿಸುತ್ತೇವೆ’ ಎಂದು ಇನ್ನೂ ಕೆಲವರು ಹುರಿದುಂಬಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>