<p>ಶಿವಮೊಗ್ಗ: ಮನರಂಜನೆ ಕ್ಷೇತ್ರದ ವ್ಯಾಪ್ತಿ ವಿಸ್ತಾರವಾಗುತ್ತಿರುವ ಇವತ್ತಿನ ಸಂದರ್ಭದಲ್ಲಿ ಉತ್ತಮ ಅಭಿರುಚಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿರಿಯ ರಂಗಕರ್ಮಿ ಬಸವರಾಜ ಬೆಂಗೇರಿ ಹೇಳಿದರು.</p>.<p>ಇಲ್ಲಿನ ಬಸವಕೇಂದ್ರದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಸಿನಿಮಾ, ಟಿವಿ ಮಾಧ್ಯಮಗಳ ಜೊತೆಗೆ ಇಂದು ಮೊಬೈಲ್ ವಿರುದ್ಧವೂ ಕಂಪನಿ ನಾಟಕಗಳು ಸೆಣೆಸಬೇಕಾಗಿದೆ’ ಎಂದು ಹೇಳಿದರು.</p>.<p>‘ದ್ವಂದ್ವಾರ್ಥ ಸಂಭಾಷಣೆಗಳಿಂದ ಒಂದು ವರ್ಗದ ಪ್ರೇಕ್ಷಕರನ್ನು ಸೆಳೆದಿದ್ದ ಕಂಪನಿ ನಾಟಕಗಳು ಇದೇ ಸಂದರ್ಭದಲ್ಲಿ ಸದಭಿರುಚಿಯ ದೊಡ್ಡ ಪ್ರೇಕ್ಷಕ ವರ್ಗವನ್ನು ಕಳೆದುಕೊಂಡಿದೆ. ಇದನ್ನು ಅರ್ಥ ಮಾಡಿಕೊಂಡ ಕೆಲ ಕಂಪನಿಗಳು ಮರಳಿ ಉತ್ತಮ ಗುಣಮಟ್ಟದ ನಾಟಕಗಳ ಪ್ರದರ್ಶಿಸುವ ಕೆಲಸ ಮಾಡುತ್ತಿವೆ’ ಎಂದರು. </p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ‘ಅಸಭ್ಯ, ಅನೈತಿಕ, ಅನಾರೋಗ್ಯಕರ ವ್ಯಕ್ತಿತ್ವಗಳೇ ಇಂದಿನ ಯುವ ಜನರಿಗೆ ಮಾದರಿ ಆಗುತ್ತಿರುವುದು ದುರಂತ’ ಎಂದು ಬೇಸರಿಸಿದರು.</p>.<p>ಕೀಳು ಅಭಿರುಚಿ ಬೆಳೆಸುವುದೇ ಆದರ್ಶ ಎಂದು ಸಿನಿಮಾ-ಟಿವಿಗಳಲ್ಲಿ ತೋರಿಸಲಾಗುತ್ತಿದೆ. ಇಂಥ ಪರಿಸರದಲ್ಲಿ ಸ್ವಸ್ಥ ಸಮಾಜ ಕಟ್ಟುವ ಹೊಣೆ ಎಲ್ಲರ ಮೇಲಿದೆ ಎಂದರು.</p>.<p>ರಂಗಕರ್ಮಿ ಸಾಸ್ವೇಹಳ್ಳಿ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದರ ಒಕ್ಕೂಟದ ಅಧ್ಯಕ್ಷ ಕಾಂತೇಶ ಕದರಮಂಡಲಗಿ, ಪತ್ರಕರ್ತ ಆರ್.ಎಸ್. ಹಾಲಸ್ವಾಮಿ ಹಾಗೂ ಬಸವಕೇಂದ್ರದ ಉಪಾಧ್ಯಕ್ಷ ಚಂದ್ರಪ್ಪ, ರಂಗಕರ್ಮಿ ಗಣೇಶ್ ಕೆಂಚನಾಲ, ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಮನರಂಜನೆ ಕ್ಷೇತ್ರದ ವ್ಯಾಪ್ತಿ ವಿಸ್ತಾರವಾಗುತ್ತಿರುವ ಇವತ್ತಿನ ಸಂದರ್ಭದಲ್ಲಿ ಉತ್ತಮ ಅಭಿರುಚಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿರಿಯ ರಂಗಕರ್ಮಿ ಬಸವರಾಜ ಬೆಂಗೇರಿ ಹೇಳಿದರು.</p>.<p>ಇಲ್ಲಿನ ಬಸವಕೇಂದ್ರದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಸಿನಿಮಾ, ಟಿವಿ ಮಾಧ್ಯಮಗಳ ಜೊತೆಗೆ ಇಂದು ಮೊಬೈಲ್ ವಿರುದ್ಧವೂ ಕಂಪನಿ ನಾಟಕಗಳು ಸೆಣೆಸಬೇಕಾಗಿದೆ’ ಎಂದು ಹೇಳಿದರು.</p>.<p>‘ದ್ವಂದ್ವಾರ್ಥ ಸಂಭಾಷಣೆಗಳಿಂದ ಒಂದು ವರ್ಗದ ಪ್ರೇಕ್ಷಕರನ್ನು ಸೆಳೆದಿದ್ದ ಕಂಪನಿ ನಾಟಕಗಳು ಇದೇ ಸಂದರ್ಭದಲ್ಲಿ ಸದಭಿರುಚಿಯ ದೊಡ್ಡ ಪ್ರೇಕ್ಷಕ ವರ್ಗವನ್ನು ಕಳೆದುಕೊಂಡಿದೆ. ಇದನ್ನು ಅರ್ಥ ಮಾಡಿಕೊಂಡ ಕೆಲ ಕಂಪನಿಗಳು ಮರಳಿ ಉತ್ತಮ ಗುಣಮಟ್ಟದ ನಾಟಕಗಳ ಪ್ರದರ್ಶಿಸುವ ಕೆಲಸ ಮಾಡುತ್ತಿವೆ’ ಎಂದರು. </p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ‘ಅಸಭ್ಯ, ಅನೈತಿಕ, ಅನಾರೋಗ್ಯಕರ ವ್ಯಕ್ತಿತ್ವಗಳೇ ಇಂದಿನ ಯುವ ಜನರಿಗೆ ಮಾದರಿ ಆಗುತ್ತಿರುವುದು ದುರಂತ’ ಎಂದು ಬೇಸರಿಸಿದರು.</p>.<p>ಕೀಳು ಅಭಿರುಚಿ ಬೆಳೆಸುವುದೇ ಆದರ್ಶ ಎಂದು ಸಿನಿಮಾ-ಟಿವಿಗಳಲ್ಲಿ ತೋರಿಸಲಾಗುತ್ತಿದೆ. ಇಂಥ ಪರಿಸರದಲ್ಲಿ ಸ್ವಸ್ಥ ಸಮಾಜ ಕಟ್ಟುವ ಹೊಣೆ ಎಲ್ಲರ ಮೇಲಿದೆ ಎಂದರು.</p>.<p>ರಂಗಕರ್ಮಿ ಸಾಸ್ವೇಹಳ್ಳಿ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದರ ಒಕ್ಕೂಟದ ಅಧ್ಯಕ್ಷ ಕಾಂತೇಶ ಕದರಮಂಡಲಗಿ, ಪತ್ರಕರ್ತ ಆರ್.ಎಸ್. ಹಾಲಸ್ವಾಮಿ ಹಾಗೂ ಬಸವಕೇಂದ್ರದ ಉಪಾಧ್ಯಕ್ಷ ಚಂದ್ರಪ್ಪ, ರಂಗಕರ್ಮಿ ಗಣೇಶ್ ಕೆಂಚನಾಲ, ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>