<p>ಭದ್ರಾವತಿ: ಕ್ರೈಸ್ತ ಸಮುದಾಯದ ಹಿತರಕ್ಷಣೆ ದೃಷ್ಟಿಯಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ತೆಲುಗು ಕ್ರೈಸ್ತ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಯೇಸುದಾಸ್ ತಿಳಿಸಿದರು.</p>.<p>ಹಿಂದಿನ ಚುನಾವಣೆಯಲ್ಲಿ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸಲಾಗಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕ್ರೈಸ್ತ ಸಂಘಟಕರಿಗೆ ಕಿರುಕುಳ ಹೆಚ್ಚುತ್ತಿದೆ. ಕ್ರೈಸ್ತ ಸಮುದಾಯದವರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಾಜಕೀಯ ಸ್ಥಾನಮಾನದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಮ್ಮ ಆದ್ಯತೆ ಎಂದು ಹೇಳಿದರು.</p>.<p>ತಾಲೂಕಿನಲ್ಲಿ 25,000 ಕ್ರೈಸ್ತ ಮತದಾರರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ಜಾತ್ಯತೀತ ನಾಯಕರಾಗಿದ್ದರು. ಅವರು ಎಲ್ಲಾ ಜಾತಿ, ಧರ್ಮಗಳ ಜನರ ಪರವಾಗಿ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಾಗುತ್ತಿದೆ. ಅಲ್ಲದೇ ಕ್ಷೇತ್ರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಕ್ರೈಸ್ತ ಸಮುದಾಯದ ಪರವಾಗಿದ್ದಾರೆ ಎಂದು ತೆಲುಗು ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಜೆ.ಭಾಸ್ಕರ್ ಬಾಬು ತಿಳಿಸಿದರು.</p>.<p>ಫಾಸ್ಟರ್ಗಳಾದ ಜಾನ್ಸನ್, ಉಮೇಶ್, ಜಯರಾಂ, ಪ್ರಭಾಕರ್, ಅಂತೋಣಿ ಪ್ರಕಾಶ್, ಮುಖಂಡರಾದ ಗ್ಯಾಬ್ರಿಯಲ್, ರಾಜು, ಅಂತೋಣಿ, ಎಂ.ಸಾಮ್ಯುಯೆಲ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ಕ್ರೈಸ್ತ ಸಮುದಾಯದ ಹಿತರಕ್ಷಣೆ ದೃಷ್ಟಿಯಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ತೆಲುಗು ಕ್ರೈಸ್ತ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಯೇಸುದಾಸ್ ತಿಳಿಸಿದರು.</p>.<p>ಹಿಂದಿನ ಚುನಾವಣೆಯಲ್ಲಿ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸಲಾಗಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕ್ರೈಸ್ತ ಸಂಘಟಕರಿಗೆ ಕಿರುಕುಳ ಹೆಚ್ಚುತ್ತಿದೆ. ಕ್ರೈಸ್ತ ಸಮುದಾಯದವರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಾಜಕೀಯ ಸ್ಥಾನಮಾನದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಮ್ಮ ಆದ್ಯತೆ ಎಂದು ಹೇಳಿದರು.</p>.<p>ತಾಲೂಕಿನಲ್ಲಿ 25,000 ಕ್ರೈಸ್ತ ಮತದಾರರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ಜಾತ್ಯತೀತ ನಾಯಕರಾಗಿದ್ದರು. ಅವರು ಎಲ್ಲಾ ಜಾತಿ, ಧರ್ಮಗಳ ಜನರ ಪರವಾಗಿ ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಾಗುತ್ತಿದೆ. ಅಲ್ಲದೇ ಕ್ಷೇತ್ರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಕ್ರೈಸ್ತ ಸಮುದಾಯದ ಪರವಾಗಿದ್ದಾರೆ ಎಂದು ತೆಲುಗು ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಜೆ.ಭಾಸ್ಕರ್ ಬಾಬು ತಿಳಿಸಿದರು.</p>.<p>ಫಾಸ್ಟರ್ಗಳಾದ ಜಾನ್ಸನ್, ಉಮೇಶ್, ಜಯರಾಂ, ಪ್ರಭಾಕರ್, ಅಂತೋಣಿ ಪ್ರಕಾಶ್, ಮುಖಂಡರಾದ ಗ್ಯಾಬ್ರಿಯಲ್, ರಾಜು, ಅಂತೋಣಿ, ಎಂ.ಸಾಮ್ಯುಯೆಲ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>