<p><strong>ಭದ್ರಾವತಿ:</strong> ‘ದೇವರು ಪ್ರತಿಯೊಬ್ಬರಿಗೂ ಒಂದು ವಿಶೇಷ ಶಕ್ತಿ ಕೊಟ್ಟಿರುತ್ತಾನೆ. ಅಂತಹ ಶಕ್ತಿ ಹೊಂದಿರುವವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ದೈಹಿಕ ನ್ಯೂನತೆ ಇರುವವರನ್ನು ಮಾನವೀಯತೆಯಿಂದ ಕಾಣಬೇಕು’ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ತಿಳಿಸಿದರು.</p>.<p>ನಗರದ ನ್ಯೂಟೌನ್ನಲ್ಲಿರುವ ಶಿವಭದ್ರಾ ಟ್ರಸ್ಟ್ ವತಿಯಿಂದ ತರಂಗ ಕಿವುಡ ಮಕ್ಕಳ ಹಿರಿಯ ಮತ್ತು ಪ್ರಾಥಮಿಕ ಶಾಲೆಗೆ ಈಚೆಗೆ ಭೇಟಿ ನೀಡಿ, ನಂತರ ಶುಗರ್ ಟೌನ್ ಲಯನ್ಸ್ ಕ್ಲಬ್ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇತರರು ತೊಂದರೆಯಲ್ಲಿ ಇದ್ದರೆ ಅವರಿಗೆ ಕಿಂಚಿತ್ತಾದರೂ ಸಹಾಯ ಮಾಡುವ ಮೂಲಕ ಸಮಾಜದ ಋಣ ತೀರಿಸಬೇಕು. ಈ ಶಾಲೆಯಲ್ಲಿರುವ ಮಕ್ಕಳಿಗೆ ಕಿವಿ ಕೇಳಿಸದಿರಬಹುದು, ಮಾತನಾಡಲು ಬಾರದಿರಬಹುದು. ಆದರೆ, ಸಾಮಾನ್ಯ ಜನರು ಮಾಡುವ ಸಾಧನೆ ಮುಂದೊಂದು ದಿನ ಈ ಮಕ್ಕಳು ಸಹ ಸಮಾಜದ ಎಲ್ಲರ ಕಿವಿಗೆ ಕೇಳಿಸಿ, ಅವರ ಬಾಯಲ್ಲಿ ಇವರ ಸಾಧನೆ ಮಾತಾಡುವಂತಾಗುತ್ತದೆ. ಸಾಮಾನ್ಯ ಮಕ್ಕಳ ಪ್ರತಿಭೆಯೊಂದಿಗೆ ನೀವು ಸಹ ಸ್ಪರ್ಧಿಸುವಂತಾಗಲಿ’ ಎಂದು ಹಾರೈಸಿದರು.</p>.<p>ಸುಜಾತಾ, ಗೀತಾ ಪ್ರಾರ್ಥನೆ ಮಾಡಿದರು. ಶೈಲಾ ಅಮೃತವಚನ ವಾಚಿಸಿದರು. ತಾರಾಮಣಿ ಸ್ವಾಗತಿಸಿದರು. ಎಂ.ಜಿ. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾಮ ಕಥಾನಕ ನೃತ್ಯ ಪ್ರದರ್ಶನ ಮಾಡಿದ್ದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ‘ದೇವರು ಪ್ರತಿಯೊಬ್ಬರಿಗೂ ಒಂದು ವಿಶೇಷ ಶಕ್ತಿ ಕೊಟ್ಟಿರುತ್ತಾನೆ. ಅಂತಹ ಶಕ್ತಿ ಹೊಂದಿರುವವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ದೈಹಿಕ ನ್ಯೂನತೆ ಇರುವವರನ್ನು ಮಾನವೀಯತೆಯಿಂದ ಕಾಣಬೇಕು’ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ತಿಳಿಸಿದರು.</p>.<p>ನಗರದ ನ್ಯೂಟೌನ್ನಲ್ಲಿರುವ ಶಿವಭದ್ರಾ ಟ್ರಸ್ಟ್ ವತಿಯಿಂದ ತರಂಗ ಕಿವುಡ ಮಕ್ಕಳ ಹಿರಿಯ ಮತ್ತು ಪ್ರಾಥಮಿಕ ಶಾಲೆಗೆ ಈಚೆಗೆ ಭೇಟಿ ನೀಡಿ, ನಂತರ ಶುಗರ್ ಟೌನ್ ಲಯನ್ಸ್ ಕ್ಲಬ್ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇತರರು ತೊಂದರೆಯಲ್ಲಿ ಇದ್ದರೆ ಅವರಿಗೆ ಕಿಂಚಿತ್ತಾದರೂ ಸಹಾಯ ಮಾಡುವ ಮೂಲಕ ಸಮಾಜದ ಋಣ ತೀರಿಸಬೇಕು. ಈ ಶಾಲೆಯಲ್ಲಿರುವ ಮಕ್ಕಳಿಗೆ ಕಿವಿ ಕೇಳಿಸದಿರಬಹುದು, ಮಾತನಾಡಲು ಬಾರದಿರಬಹುದು. ಆದರೆ, ಸಾಮಾನ್ಯ ಜನರು ಮಾಡುವ ಸಾಧನೆ ಮುಂದೊಂದು ದಿನ ಈ ಮಕ್ಕಳು ಸಹ ಸಮಾಜದ ಎಲ್ಲರ ಕಿವಿಗೆ ಕೇಳಿಸಿ, ಅವರ ಬಾಯಲ್ಲಿ ಇವರ ಸಾಧನೆ ಮಾತಾಡುವಂತಾಗುತ್ತದೆ. ಸಾಮಾನ್ಯ ಮಕ್ಕಳ ಪ್ರತಿಭೆಯೊಂದಿಗೆ ನೀವು ಸಹ ಸ್ಪರ್ಧಿಸುವಂತಾಗಲಿ’ ಎಂದು ಹಾರೈಸಿದರು.</p>.<p>ಸುಜಾತಾ, ಗೀತಾ ಪ್ರಾರ್ಥನೆ ಮಾಡಿದರು. ಶೈಲಾ ಅಮೃತವಚನ ವಾಚಿಸಿದರು. ತಾರಾಮಣಿ ಸ್ವಾಗತಿಸಿದರು. ಎಂ.ಜಿ. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾಮ ಕಥಾನಕ ನೃತ್ಯ ಪ್ರದರ್ಶನ ಮಾಡಿದ್ದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>