<p><strong>ಸಾಗರ: ಅಂಗವಿಕಲರ ಬಗ್ಗೆ ಅನುಕಂಪ ತೋರುವ ಬದಲು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</strong></p>.<p><strong>ಇಲ್ಲಿನ ಗಾಂಧಿ ಮೈದಾನದಲ್ಲಿ ಕಂಪ್ಯಾಷನ್ ಇಂಡಿಯಾ ಟ್ರಸ್ಟ್ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ, ರೇಷನ್ ಕಿಟ್, ವಾಕರ್, ಊರುಗೋಲು ಕೇನ್ ವಿತರಿಸಿ ಅವರು ಮಾತನಾಡಿದರು.</strong></p>.<p><strong>ಸರ್ಕಾರ ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಂಬಂಧ ಹಲವು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ದೊರಕುವಂತೆ ಸಂಘ ಸಂಸ್ಥೆಗಳು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</strong></p>.<p><strong>‘ಸಂಕಷ್ಟದಲ್ಲಿರುವವರಿಗೆ ಕೈಲಾದ ನೆರವು ನೀಡುವ ಮೂಲಕ ಸ್ಪಂದಿಸುವುದು ಮಾನವೀಯತೆ ನಮ್ಮಲ್ಲಿ ಇನ್ನೂ ಉಳಿದಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ನೂರು ಅಂಗವಿಕಲರ ನೆರವಿಗೆ ಧಾವಿಸಿರುವ ಕಂಪ್ಯಾಷನ್ ಇಂಡಿಯಾ ಸಂಸ್ಥೆಯ ಕಾರ್ಯ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗುವಂತಿದೆ’ ಎಂದು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಹೇಳಿದರು. </strong></p>.<p><strong>ಕಂಪ್ಯಾಷನ್ ಟ್ರಸ್ಟ್ ಅಧ್ಯಕ್ಷ ರಾಬರ್ಟ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಧರ್ಮೇಂದ್ರ ಶಿರವಾಳ, ಶ್ಯಾಮಸುಂದರ, ವಿಲ್ಸನ್ ಗೋಮ್ಸ್, ಅಬ್ದುಲ್ಲಾ, ಆರ್ಥರ್ ಗೋಮ್ಸ್, ಜಾನ್ ಲೋಪಿಸ್, ಜಾನ್ ಡಿಸೋಜ, ಜೋಸೆಫ್ ರೋಡ್ರಿಗಸ್, ಫ್ರಾನ್ಸಿಸ್ ಮಿರಾಂಡ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಅಂಗವಿಕಲರ ಬಗ್ಗೆ ಅನುಕಂಪ ತೋರುವ ಬದಲು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</strong></p>.<p><strong>ಇಲ್ಲಿನ ಗಾಂಧಿ ಮೈದಾನದಲ್ಲಿ ಕಂಪ್ಯಾಷನ್ ಇಂಡಿಯಾ ಟ್ರಸ್ಟ್ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ, ರೇಷನ್ ಕಿಟ್, ವಾಕರ್, ಊರುಗೋಲು ಕೇನ್ ವಿತರಿಸಿ ಅವರು ಮಾತನಾಡಿದರು.</strong></p>.<p><strong>ಸರ್ಕಾರ ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಂಬಂಧ ಹಲವು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ದೊರಕುವಂತೆ ಸಂಘ ಸಂಸ್ಥೆಗಳು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</strong></p>.<p><strong>‘ಸಂಕಷ್ಟದಲ್ಲಿರುವವರಿಗೆ ಕೈಲಾದ ನೆರವು ನೀಡುವ ಮೂಲಕ ಸ್ಪಂದಿಸುವುದು ಮಾನವೀಯತೆ ನಮ್ಮಲ್ಲಿ ಇನ್ನೂ ಉಳಿದಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ನೂರು ಅಂಗವಿಕಲರ ನೆರವಿಗೆ ಧಾವಿಸಿರುವ ಕಂಪ್ಯಾಷನ್ ಇಂಡಿಯಾ ಸಂಸ್ಥೆಯ ಕಾರ್ಯ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗುವಂತಿದೆ’ ಎಂದು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಹೇಳಿದರು. </strong></p>.<p><strong>ಕಂಪ್ಯಾಷನ್ ಟ್ರಸ್ಟ್ ಅಧ್ಯಕ್ಷ ರಾಬರ್ಟ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಧರ್ಮೇಂದ್ರ ಶಿರವಾಳ, ಶ್ಯಾಮಸುಂದರ, ವಿಲ್ಸನ್ ಗೋಮ್ಸ್, ಅಬ್ದುಲ್ಲಾ, ಆರ್ಥರ್ ಗೋಮ್ಸ್, ಜಾನ್ ಲೋಪಿಸ್, ಜಾನ್ ಡಿಸೋಜ, ಜೋಸೆಫ್ ರೋಡ್ರಿಗಸ್, ಫ್ರಾನ್ಸಿಸ್ ಮಿರಾಂಡ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>