<p><strong>ರಿಪ್ಪನ್ಪೇಟೆ</strong>: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಅವರ ಕಡೆಗದ್ದೆ ಕಾಡಂಚಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಅವರ ಕುಟುಂಬಕ್ಕೆ ಸರ್ಕಾರ ತಕ್ಷಣವೇ ₹ 15 ಲಕ್ಷ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಹಾಲಪ್ಪ ಎಚ್.ಹರತಾಳು ಆಗ್ರಹಿಸಿದ್ದಾರೆ.</p>.<p>ಮೃತ ಕುಟುಂಬದವರನ್ನು ಶುಕ್ರವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.</p>.<p>ನಂತರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಈ ಹಿಂದೆ ರಾಜ್ಯದ ಆನೆ ದಾಳಿ ಮಾಡಿದೆ ಎಂದು ಕೇರಳದ ವ್ಯಕ್ತಿಯೊಬ್ಬರಿಗೆ ರಾತ್ರೋ ರಾತ್ರಿ ಪರಿಹಾರ ನೀಡಿ ಬಂದಿದೆ. ಕಾಡು ಪ್ರಾಣಿಗಳ ದಾಳಿಯಿಂದ ಸಾವನಪ್ಪಿದ್ದ 24 ತಾಸಿನ ಒಳಗೆ ₹ 15 ಲಕ್ಷ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದೆ’ ಎಂದರು.</p>.<p>‘ಅಲ್ಲದೆ ಮಲೆನಾಡಿನ ರೈತರ ಕಾಡಿನ ನಂಟು ನಿರಂತರವಾಗಿದ್ದು, ಕಾಡಿನ ರಕ್ಷಣೆಯೊಂದಿಗೆ ತಮ್ಮ ಕೃಷಿ ಚಟುವಟಿಕೆಗೆ ಸೊಪ್ಪು, ಸದೆ ಹಾಗೂ ದರಗು ತರುವುದು ಸಾಮಾನ್ಯ. ಆದರೆ, ರೈತನ ಜಮೀನಿನ ಪಕ್ಕದಲ್ಲಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಘಟನೆ ಜರುಗಿದೆ ಎಂಬ ಕಾರಣ ನೀಡಿ ಪರಿಹಾರ ನೀಡಲು ಅಸಾಧ್ಯ ಎಂಬ ಅಭಿಪ್ರಾಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಪಡಿಸಿರುವುದು ಕಳವಳಕಾರಿ ಸಂಗತಿ’ ಎಂದರು.</p>.<p>ರೈತ ಕಾಡಿನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಕಾನೂನು ಬಾಹಿರ ಅಕ್ರಮ ಮರ ಕಡಿತಲೆ, ಕಾಡು ಪ್ರಾಣಿಗಳ ಬೇಟೆಗೆ ಹೋದವನಲ್ಲ ಎಂಬ ವಿಷಯವನ್ನು ಅಧಿಕಾರಿಗಳು ಮನದಟ್ಟು ಮಾಡಿಕೊಳ್ಳಲಿ. ಬಡ ರೈತ ಕುಟುಂಬಕ್ಕೆ ಅನ್ಯಾಯವಾದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಅವರ ಕಡೆಗದ್ದೆ ಕಾಡಂಚಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಅವರ ಕುಟುಂಬಕ್ಕೆ ಸರ್ಕಾರ ತಕ್ಷಣವೇ ₹ 15 ಲಕ್ಷ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಹಾಲಪ್ಪ ಎಚ್.ಹರತಾಳು ಆಗ್ರಹಿಸಿದ್ದಾರೆ.</p>.<p>ಮೃತ ಕುಟುಂಬದವರನ್ನು ಶುಕ್ರವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.</p>.<p>ನಂತರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಈ ಹಿಂದೆ ರಾಜ್ಯದ ಆನೆ ದಾಳಿ ಮಾಡಿದೆ ಎಂದು ಕೇರಳದ ವ್ಯಕ್ತಿಯೊಬ್ಬರಿಗೆ ರಾತ್ರೋ ರಾತ್ರಿ ಪರಿಹಾರ ನೀಡಿ ಬಂದಿದೆ. ಕಾಡು ಪ್ರಾಣಿಗಳ ದಾಳಿಯಿಂದ ಸಾವನಪ್ಪಿದ್ದ 24 ತಾಸಿನ ಒಳಗೆ ₹ 15 ಲಕ್ಷ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದೆ’ ಎಂದರು.</p>.<p>‘ಅಲ್ಲದೆ ಮಲೆನಾಡಿನ ರೈತರ ಕಾಡಿನ ನಂಟು ನಿರಂತರವಾಗಿದ್ದು, ಕಾಡಿನ ರಕ್ಷಣೆಯೊಂದಿಗೆ ತಮ್ಮ ಕೃಷಿ ಚಟುವಟಿಕೆಗೆ ಸೊಪ್ಪು, ಸದೆ ಹಾಗೂ ದರಗು ತರುವುದು ಸಾಮಾನ್ಯ. ಆದರೆ, ರೈತನ ಜಮೀನಿನ ಪಕ್ಕದಲ್ಲಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಘಟನೆ ಜರುಗಿದೆ ಎಂಬ ಕಾರಣ ನೀಡಿ ಪರಿಹಾರ ನೀಡಲು ಅಸಾಧ್ಯ ಎಂಬ ಅಭಿಪ್ರಾಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಪಡಿಸಿರುವುದು ಕಳವಳಕಾರಿ ಸಂಗತಿ’ ಎಂದರು.</p>.<p>ರೈತ ಕಾಡಿನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಕಾನೂನು ಬಾಹಿರ ಅಕ್ರಮ ಮರ ಕಡಿತಲೆ, ಕಾಡು ಪ್ರಾಣಿಗಳ ಬೇಟೆಗೆ ಹೋದವನಲ್ಲ ಎಂಬ ವಿಷಯವನ್ನು ಅಧಿಕಾರಿಗಳು ಮನದಟ್ಟು ಮಾಡಿಕೊಳ್ಳಲಿ. ಬಡ ರೈತ ಕುಟುಂಬಕ್ಕೆ ಅನ್ಯಾಯವಾದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>