<p><strong>ತೀರ್ಥಹಳ್ಳಿ:</strong> ಮಳೆಗಾಲದಲ್ಲಿ ರಸ್ತೆಗೆ ಮರಗಳು ಬೀಳುವ ಹಿನ್ನೆಲೆಯಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸರ ಮಜರೆ ಗ್ರಾಮದಲ್ಲಿ 7 ಮರಗಳನ್ನು ಕಟಾವು ಮಾಡಲಾಗಿದೆ.</p>.<p>ಗ್ರಾಮ ಪಂಚಾಯಿತಿ ಮರ ಕಡಿತಲೆಗೆ ಅರ್ಜಿ ಸಲ್ಲಿಸಿದ್ದು, 7 ಮರಗಳ ಕಟಾವಿಗೆ ಆದೇಶ ನೀಡಲಾಗಿದೆ ಎಂದು ತೀರ್ಥಹಳ್ಳಿಯ ವಲಯ ಅರಣ್ಯಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.</p>.<p>2023ರ ನವೆಂಬರ್ನಲ್ಲಿ ತೀರ್ಥಹಳ್ಳಿ-ಕೋಣಂದೂರು ಸಂಪರ್ಕದ ರಾಜ್ಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಕೈಗೊಳ್ಳಲಾಗಿತ್ತು. ಕಾಮಗಾರಿಯ ವೇಳೆ ಅರಣ್ಯ ಇಲಾಖೆಯ ಕಾನೂನು ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಮರ ಕಡಿತಲೆಗೆ ಅವಕಾಶ ನೀಡಿರಲಿಲ್ಲ.</p>.<p>ಈ ಕಾರಣ ಮರ ಕಡಿಯುವ ಬದಲು ಬೇರುಗಳನ್ನು ಸಡಿಲಿಸುವ ತಂತ್ರ ಅನುಸರಿಸಲಾಗಿದೆ ಎಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.</p>.<p>ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಈಗ ಮರಗಳನ್ನು ಕಟಾವು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಮಳೆಗಾಲದಲ್ಲಿ ರಸ್ತೆಗೆ ಮರಗಳು ಬೀಳುವ ಹಿನ್ನೆಲೆಯಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸರ ಮಜರೆ ಗ್ರಾಮದಲ್ಲಿ 7 ಮರಗಳನ್ನು ಕಟಾವು ಮಾಡಲಾಗಿದೆ.</p>.<p>ಗ್ರಾಮ ಪಂಚಾಯಿತಿ ಮರ ಕಡಿತಲೆಗೆ ಅರ್ಜಿ ಸಲ್ಲಿಸಿದ್ದು, 7 ಮರಗಳ ಕಟಾವಿಗೆ ಆದೇಶ ನೀಡಲಾಗಿದೆ ಎಂದು ತೀರ್ಥಹಳ್ಳಿಯ ವಲಯ ಅರಣ್ಯಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.</p>.<p>2023ರ ನವೆಂಬರ್ನಲ್ಲಿ ತೀರ್ಥಹಳ್ಳಿ-ಕೋಣಂದೂರು ಸಂಪರ್ಕದ ರಾಜ್ಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಕೈಗೊಳ್ಳಲಾಗಿತ್ತು. ಕಾಮಗಾರಿಯ ವೇಳೆ ಅರಣ್ಯ ಇಲಾಖೆಯ ಕಾನೂನು ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಮರ ಕಡಿತಲೆಗೆ ಅವಕಾಶ ನೀಡಿರಲಿಲ್ಲ.</p>.<p>ಈ ಕಾರಣ ಮರ ಕಡಿಯುವ ಬದಲು ಬೇರುಗಳನ್ನು ಸಡಿಲಿಸುವ ತಂತ್ರ ಅನುಸರಿಸಲಾಗಿದೆ ಎಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.</p>.<p>ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಈಗ ಮರಗಳನ್ನು ಕಟಾವು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>