ಸದರಿ ಗ್ರೂಪ್ನಲ್ಲಿ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಮಾಹಿತಿ ಹಂಚಿಕೊಂಡಿದ್ದಾರೆ. ನಂತರ ‘ಎಸ್ಎಸ್ಎಐಐ’ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ. ಲಾಭ ಗಳಿಕೆಯ ಆಮಿಷ ಒಡ್ಡಿದ್ದಾರೆ. ಇದನ್ನು ನಂಬಿದ ವಿದ್ಯಾಸಾಗರ್ ಜೂನ್ 4ರಿಂದ 21ರ ವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹40.80 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅವರಿಗೆ ₹4.40 ಲಕ್ಷ ವಾಪಸ್ ಹಾಕಿದ್ದಾರೆ.