<p><strong>ತುಮಕೂರು:</strong> ನಗರದ ಶಿರಾ ಗೇಟ್ ರಸ್ತೆಯ ಎಸ್– ಮಾಲ್ ಬಳಿ ಶಿಥಿಲಗೊಂಡಿರುವ ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ₹6.50 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.</p>.<p>ಶಿಥಿಲಗೊಂಡಿರುವ ಸೇತುವೆ ಬಳಿ ಈಚೆಗೆ ಸಂಭವಿಸಿದ ಅಪಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಸ್ಥಳಕ್ಕೆ ಬುಧವಾರ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದರು.</p>.<p>ಸೇತುವೆ, ರಸ್ತೆ ವಿಸ್ತರಣೆಗೆ ಸರ್ಕಾರದ ಹಂತದಲ್ಲಿ ಒಪ್ಪಿಗೆ ಸಿಕ್ಕಿದ್ದು, ಅನುದಾನ ಸಹ ಬಿಡುಗಡೆಯಾಗಿದೆ. ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.</p>.<p>ಶಿರಾ ಬೈಪಾಸ್ಗೆ ಸಂಪರ್ಕ ಕಲ್ಪಿಸುವ 4 ಕಿ.ಮೀ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಆದರೆ ಶಿಥಿಲಗೊಂಡಿರುವ ಸೇತುವೆಯನ್ನು ಪುನರ್ ನಿರ್ಮಾಣ ಮಾಡಿಲ್ಲ. ಅಮಾನಿಕೆರೆ ನೀರು ಹರಿದು ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ. ಈ ಜಾಗ ಕಿರಿದಾಗಿದ್ದು, ಪ್ರತಿನಿತ್ಯವೂ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿದೆ. ಒಂದು ವೇಳೆ ಈ ಸೇತುವೆ ಕುಸಿದು ಬಿದ್ದರೆ ಶಿರಾ ಭಾಗಕ್ಕೆ ಸಂಪರ್ಕ ಕಡಿತಗೊಳ್ಳಲಿದೆ. ಹಾಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಟೂಡಾ ಆಯುಕ್ತ ಶಿವಕುಮಾರ್, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಆಶಾ, ವಿನಯ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ರವಿ, ಸಿದ್ದಪ್ಪ, ಟೂಡಾ ಎಂಜಿನಿಯರ್ ಶೈಲಜಾ, ಅರುಣ್, ಟೂಡಾ ಮಾಜಿ ಸದಸ್ಯ ಸತ್ಯಮಂಗಲ ಜಗದೀಶ್, ಪಾಲಿಕೆ ಸದಸ್ಯ ಇಂದ್ರಕುಮಾರ್, ಎಲ್ಐಸಿ ಲಿಂಗಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಶಿರಾ ಗೇಟ್ ರಸ್ತೆಯ ಎಸ್– ಮಾಲ್ ಬಳಿ ಶಿಥಿಲಗೊಂಡಿರುವ ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ₹6.50 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.</p>.<p>ಶಿಥಿಲಗೊಂಡಿರುವ ಸೇತುವೆ ಬಳಿ ಈಚೆಗೆ ಸಂಭವಿಸಿದ ಅಪಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಸ್ಥಳಕ್ಕೆ ಬುಧವಾರ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದರು.</p>.<p>ಸೇತುವೆ, ರಸ್ತೆ ವಿಸ್ತರಣೆಗೆ ಸರ್ಕಾರದ ಹಂತದಲ್ಲಿ ಒಪ್ಪಿಗೆ ಸಿಕ್ಕಿದ್ದು, ಅನುದಾನ ಸಹ ಬಿಡುಗಡೆಯಾಗಿದೆ. ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.</p>.<p>ಶಿರಾ ಬೈಪಾಸ್ಗೆ ಸಂಪರ್ಕ ಕಲ್ಪಿಸುವ 4 ಕಿ.ಮೀ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಆದರೆ ಶಿಥಿಲಗೊಂಡಿರುವ ಸೇತುವೆಯನ್ನು ಪುನರ್ ನಿರ್ಮಾಣ ಮಾಡಿಲ್ಲ. ಅಮಾನಿಕೆರೆ ನೀರು ಹರಿದು ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ. ಈ ಜಾಗ ಕಿರಿದಾಗಿದ್ದು, ಪ್ರತಿನಿತ್ಯವೂ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿದೆ. ಒಂದು ವೇಳೆ ಈ ಸೇತುವೆ ಕುಸಿದು ಬಿದ್ದರೆ ಶಿರಾ ಭಾಗಕ್ಕೆ ಸಂಪರ್ಕ ಕಡಿತಗೊಳ್ಳಲಿದೆ. ಹಾಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಟೂಡಾ ಆಯುಕ್ತ ಶಿವಕುಮಾರ್, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಆಶಾ, ವಿನಯ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ರವಿ, ಸಿದ್ದಪ್ಪ, ಟೂಡಾ ಎಂಜಿನಿಯರ್ ಶೈಲಜಾ, ಅರುಣ್, ಟೂಡಾ ಮಾಜಿ ಸದಸ್ಯ ಸತ್ಯಮಂಗಲ ಜಗದೀಶ್, ಪಾಲಿಕೆ ಸದಸ್ಯ ಇಂದ್ರಕುಮಾರ್, ಎಲ್ಐಸಿ ಲಿಂಗಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>