<p>ತುಮಕೂರು: ಜಿಲ್ಲೆಯಲ್ಲಿ ಈವರೆಗೆ 31,099 ನೀರಿನ ಮೂಲಗಳಿಂದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 766 ಕಡೆಯ ನೀರು ಕುಡಿಯಲು ಯೋಗ್ಯವಲ್ಲ ಎಂಬುವುದು ದೃಢಪಟ್ಟಿದೆ. ಆದರೂ ಅದೇ ನೀರನ್ನು ಸರಬರಾಜು ಮಾಡಲಾಗುತ್ತಿದೆ.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ರಾಮೇಗೌಡ ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಏಪ್ರಿಲ್ ವರೆಗೆ 173 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 1,244 ಕರುಳುಬೇನೆ, 20 ಕುಷ್ಠರೋಗ, 872 ಕ್ಷಯ, 9,589 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. 1,200 ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 136 ಜನರಲ್ಲಿ ಡೆಂಗಿ ಖಚಿತಪಟ್ಟಿದೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಡೆಂಗಿ ಪ್ರಕರಣ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಫಾಗಿಂಗ್ ಮಾಡಿಸಬೇಕು. ಹಾವು ಕಡಿತಕ್ಕೊಳಗಾದವರು ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗಬೇಕು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಹಂದಿಗಳಿಂದ ಮೆದುಳು ಜ್ವರ ಹರಡುವ ಸಾಧ್ಯತೆ ಇದೆ. ಹಂದಿಗಳನ್ನು ಜನರ ವಾಸಸ್ಥಳದಿಂದ ಕನಿಷ್ಠ 3 ಕಿ.ಮೀ ದೂರದಲ್ಲಿ ಇರುವಂತೆ ಕ್ರಮ ವಹಿಸಬೇಕು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್, ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲೆಯಲ್ಲಿ ಈವರೆಗೆ 31,099 ನೀರಿನ ಮೂಲಗಳಿಂದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 766 ಕಡೆಯ ನೀರು ಕುಡಿಯಲು ಯೋಗ್ಯವಲ್ಲ ಎಂಬುವುದು ದೃಢಪಟ್ಟಿದೆ. ಆದರೂ ಅದೇ ನೀರನ್ನು ಸರಬರಾಜು ಮಾಡಲಾಗುತ್ತಿದೆ.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ರಾಮೇಗೌಡ ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಏಪ್ರಿಲ್ ವರೆಗೆ 173 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 1,244 ಕರುಳುಬೇನೆ, 20 ಕುಷ್ಠರೋಗ, 872 ಕ್ಷಯ, 9,589 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. 1,200 ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 136 ಜನರಲ್ಲಿ ಡೆಂಗಿ ಖಚಿತಪಟ್ಟಿದೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಡೆಂಗಿ ಪ್ರಕರಣ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಫಾಗಿಂಗ್ ಮಾಡಿಸಬೇಕು. ಹಾವು ಕಡಿತಕ್ಕೊಳಗಾದವರು ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗಬೇಕು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಹಂದಿಗಳಿಂದ ಮೆದುಳು ಜ್ವರ ಹರಡುವ ಸಾಧ್ಯತೆ ಇದೆ. ಹಂದಿಗಳನ್ನು ಜನರ ವಾಸಸ್ಥಳದಿಂದ ಕನಿಷ್ಠ 3 ಕಿ.ಮೀ ದೂರದಲ್ಲಿ ಇರುವಂತೆ ಕ್ರಮ ವಹಿಸಬೇಕು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್, ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>