ತಿಪಟೂರು: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಿಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ 8 ವರ್ಷದ ಚಿರತೆ ಬೋನಿಗೆ ಬಿದ್ದಿದೆ.
ಮಾದಿಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆಗಾಗ ಚಿರತೆ ಕಾಣಿಸಿಕೊಂಡು ಜನರನ್ನು ಆತಂಕಕ್ಕೆ ತಳ್ಳಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮದ ಜನರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಗೌರಿಶಂಕರ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು. ಆಹಾರ ಅರಸಿ ಬಂದು ಬೋನಿಗೆ ಬಿದ್ದಿದೆ. ಇದರಿಂದ ಈ ಭಾಗದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೋನಿಗೆ ಬಿದ್ದ ಚಿರತೆ ನೋಡಲು ಜನ ಮುಗಿಬಿದ್ದಿದ್ದರು. ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್, ಅರಣ್ಯ ಪಾಲಕ ಕೆ.ಶಿವಪ್ಪ, ಸಿಬ್ಬಂದಿ ರೇವಣಸಿದ್ದಪ್ಪ, ಮಂಜುನಾಥ್ ಹಾಜರಿದ್ದರು.