<p><strong>ಗುಬ್ಬಿ</strong>: ಪರಿಶಿಷ್ಟ ಸಮುದಾಯಗಳು ಸಂಘಟಿತರಾದರೆ ಮಾತ್ರ ಮುಖ್ಯಮಂತ್ರಿ ಹಾಗೂ ಪ್ರಧಾನಿಯಂತಹ ಹುದ್ದೆ ಪಡೆಯಲು ಸಾಧ್ಯ ಎಂದು ಛಲವಾದಿ ಸಮುದಾಯದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ನಡೆದ ಅಭಿನಂದನಾ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯನವರ ಬಳಿಕ ಪರಿಶಿಷ್ಟ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಲಾಢ್ಯರು ಪರಿಶಿಷ್ಟ ಸಮುದಾಯಗಳನ್ನು ಒಡೆಯುತ್ತಿದ್ದಾರೆ. ಸಮುದಾಯ ಸಂಘಟನೆಗೊಂಡು ಹೋರಾಟ ನಡೆಸಿದರೆ ಮಾತ್ರ ಸಾಮಾಜಿಕ ಮುಖ್ಯವಾಹಿನಿಗೆ ಬರಲು ಸಾದ್ಯ ಎಂದರು.</p>.<p>ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು. ಸರ್ಕಾರ ಜಾತಿಗಣತಿ ವರದಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಡಾ.ನಾಗಭೂಷಣ್ ಮಾತನಾಡಿ, ಪರಿಶಿಷ್ಟ ಸಮುದಾಯ ಸಂಘಟಿತರಾಗದಿದ್ದಲ್ಲಿ ಭೀಮವಾದವು ತುಳಿತಕ್ಕೆ ಒಳಗಾಗಿ ಮತ್ತೊಮ್ಮೆ ಮನುಸ್ಮೃತಿ ವಿಜೃಂಭಿಸಲಿದೆ. ಈ ದೇಶದ ಮೂಲನಿವಾಸಿಗಳು ಸಂವಿಧಾನ ಬದ್ಧ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು. ಶಿಕ್ಷಣ ಪಡೆದು ವಿಚಾರವಂತರಾಗಿ ಪರಿಸ್ಥಿತಿ ಗ್ರಹಿಸಿ ಜಾಗೃತರಾಗಬೇಕಿದೆ ಎಂದು ಹೇಳಿದರು.</p>.<p>ಬಸವವಾನಂದ ಸ್ವಾಮೀಜಿ, ಛಲವಾದಿ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ, ಗೌರವಾಧ್ಯಕ್ಷ ಲೋಕೇಶ್, ಯುವಘಟಕದ ಅಧ್ಯಕ್ಷ ಎಚ್.ಕೆ.ಮಧು, ಮುಖಂಡರಾದ ಶ್ವೇತ ಜಗದೀಶ್, ರಮೇಶ್, ನಾಗರಾಜು, ವತ್ಸಲ, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಪರಿಶಿಷ್ಟ ಸಮುದಾಯಗಳು ಸಂಘಟಿತರಾದರೆ ಮಾತ್ರ ಮುಖ್ಯಮಂತ್ರಿ ಹಾಗೂ ಪ್ರಧಾನಿಯಂತಹ ಹುದ್ದೆ ಪಡೆಯಲು ಸಾಧ್ಯ ಎಂದು ಛಲವಾದಿ ಸಮುದಾಯದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ನಡೆದ ಅಭಿನಂದನಾ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯನವರ ಬಳಿಕ ಪರಿಶಿಷ್ಟ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಲಾಢ್ಯರು ಪರಿಶಿಷ್ಟ ಸಮುದಾಯಗಳನ್ನು ಒಡೆಯುತ್ತಿದ್ದಾರೆ. ಸಮುದಾಯ ಸಂಘಟನೆಗೊಂಡು ಹೋರಾಟ ನಡೆಸಿದರೆ ಮಾತ್ರ ಸಾಮಾಜಿಕ ಮುಖ್ಯವಾಹಿನಿಗೆ ಬರಲು ಸಾದ್ಯ ಎಂದರು.</p>.<p>ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು. ಸರ್ಕಾರ ಜಾತಿಗಣತಿ ವರದಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಡಾ.ನಾಗಭೂಷಣ್ ಮಾತನಾಡಿ, ಪರಿಶಿಷ್ಟ ಸಮುದಾಯ ಸಂಘಟಿತರಾಗದಿದ್ದಲ್ಲಿ ಭೀಮವಾದವು ತುಳಿತಕ್ಕೆ ಒಳಗಾಗಿ ಮತ್ತೊಮ್ಮೆ ಮನುಸ್ಮೃತಿ ವಿಜೃಂಭಿಸಲಿದೆ. ಈ ದೇಶದ ಮೂಲನಿವಾಸಿಗಳು ಸಂವಿಧಾನ ಬದ್ಧ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು. ಶಿಕ್ಷಣ ಪಡೆದು ವಿಚಾರವಂತರಾಗಿ ಪರಿಸ್ಥಿತಿ ಗ್ರಹಿಸಿ ಜಾಗೃತರಾಗಬೇಕಿದೆ ಎಂದು ಹೇಳಿದರು.</p>.<p>ಬಸವವಾನಂದ ಸ್ವಾಮೀಜಿ, ಛಲವಾದಿ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ, ಗೌರವಾಧ್ಯಕ್ಷ ಲೋಕೇಶ್, ಯುವಘಟಕದ ಅಧ್ಯಕ್ಷ ಎಚ್.ಕೆ.ಮಧು, ಮುಖಂಡರಾದ ಶ್ವೇತ ಜಗದೀಶ್, ರಮೇಶ್, ನಾಗರಾಜು, ವತ್ಸಲ, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>