<p>ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಲಕ್ಷ್ಮೀಪುರ ಅರಣ್ಯ ಪ್ರದೇಶದಲ್ಲಿ ಬೂದನಹಳ್ಳಿಯ ಪ್ರದೀಪ್ (35) ನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ.</p>.<p>ಪ್ರದೀಪ್ ಸ್ನೇಹಿತರಾದ ನಾಗೇಶ್, ಶಂಕರ್ ಬಂಧಿತರು. ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾಗುತ್ತಿದ್ದು, ಬೇಸತ್ತ ಆರೋಪಿಗಳು ಪಾರ್ಟಿ ಮಾಡುವ ನೆಪದಲ್ಲಿ ಬೈಕ್ನಲ್ಲಿ ಕರೆದೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.</p>.<p>ಶವದ ಮಹಜರು ಸಮಯದಲ್ಲಿ ಅರೋಪಿಯೊಬ್ಬ ಸಂಶಯಾಸ್ಪದವಾಗಿ ವರ್ತಿಸುತಿದ್ದ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಮಯದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನಗಳನ್ನು ಒಂದು ಕಿ.ಮೀ ದೂರದಲ್ಲಿ ಎಸೆದಿದ್ದ ಕಲ್ಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಓಂಪ್ರಕಾಶ್, ಸಿಪಿಐ ಮಾದ್ಯನಾಯ್ಕ್, ಪಿಎಸ್ಐ ಪ್ರಶಾಂತ್ ಸಿಬ್ಬಂದಿಗಳು ಆರೋಪಿಗಳ ಬಂಧನಕ್ಕೆ ಶ್ರಮಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಲಕ್ಷ್ಮೀಪುರ ಅರಣ್ಯ ಪ್ರದೇಶದಲ್ಲಿ ಬೂದನಹಳ್ಳಿಯ ಪ್ರದೀಪ್ (35) ನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ.</p>.<p>ಪ್ರದೀಪ್ ಸ್ನೇಹಿತರಾದ ನಾಗೇಶ್, ಶಂಕರ್ ಬಂಧಿತರು. ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾಗುತ್ತಿದ್ದು, ಬೇಸತ್ತ ಆರೋಪಿಗಳು ಪಾರ್ಟಿ ಮಾಡುವ ನೆಪದಲ್ಲಿ ಬೈಕ್ನಲ್ಲಿ ಕರೆದೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.</p>.<p>ಶವದ ಮಹಜರು ಸಮಯದಲ್ಲಿ ಅರೋಪಿಯೊಬ್ಬ ಸಂಶಯಾಸ್ಪದವಾಗಿ ವರ್ತಿಸುತಿದ್ದ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಮಯದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನಗಳನ್ನು ಒಂದು ಕಿ.ಮೀ ದೂರದಲ್ಲಿ ಎಸೆದಿದ್ದ ಕಲ್ಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಓಂಪ್ರಕಾಶ್, ಸಿಪಿಐ ಮಾದ್ಯನಾಯ್ಕ್, ಪಿಎಸ್ಐ ಪ್ರಶಾಂತ್ ಸಿಬ್ಬಂದಿಗಳು ಆರೋಪಿಗಳ ಬಂಧನಕ್ಕೆ ಶ್ರಮಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>