ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್ | ಪುರಸಭಾ ಸದಸ್ಯನ ಮಗನ ಮೇಲೆ ಹಲ್ಲೆ: ಆರೋಪಿಗಳ ಬಂಧನ

Published : 22 ಸೆಪ್ಟೆಂಬರ್ 2024, 14:20 IST
Last Updated : 22 ಸೆಪ್ಟೆಂಬರ್ 2024, 14:20 IST
ಫಾಲೋ ಮಾಡಿ
Comments

ಕುಣಿಗಲ್: ಪುರಸಭಾ ಸದಸ್ಯ ಕೋಟೆ ನಾಗಣ್ಣ ಅವರ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಪಟ್ಟಣದ ಐಯಪ್ಪಸ್ವಾಮಿ ದೇವಾಲಯದ ಬಳಿ ನಾಗಣ್ಣ ಅವರ ಮಗ ರತನ್ ಗೌಡ ಮೇಲೆ ಸತೀಶ್, ಶ್ರೇಯಸ್ ಮತ್ತು ಸುಹಾಸ್ ಕಬ್ಬಿಣದ ರಾಡ್, ಸೈಕಲ್ ಚೈನ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದರು.

ನಾಗಣ್ಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕುಣಿಗಲ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT