<p><strong>ತುಮಕೂರು:</strong> ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಬ್ಬದ ವೇಳೆ ಮನೆಗೆ ಬೀಗ ಹಾಕಿಕೊಂಡು ಎರಡು–ಮೂರು ದಿನ ಬೇರೆ ಊರಿಗೆ ಹೋಗುವವರು ಎಚ್ಚರಿಕೆ ವಹಿಸಬೇಕಿದೆ.</p>.<p>ವಿವಿಧೆಡೆ ದಸರಾ ಸಮಯದಲ್ಲಿ ಹೆಚ್ಚಿನ ಮನೆಗಳಲ್ಲಿ ಕಳ್ಳತನವಾಗಿದೆ. ಕಳ್ಳರು ಯಾರೂ ಇಲ್ಲದ ಮನೆಗಳನ್ನು ಗುರಿಯಾಗಿಸಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಕೈಗೆ ಸಿಕ್ಕಿದ್ದನ್ನು ದೋಚುತ್ತಿದ್ದಾರೆ. ಮನೆಯ ಮಾಲೀಕರು ಹಬ್ಬ ಮುಗಿಸಿಕೊಂಡು ಬಂದು ನೋಡಿದಾಗ ಕಳ್ಳತನ ಆಗಿರುವುದು ಕಂಡು ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ.</p>.<p>ಹನುಮಂತಪುರದ ಮೋಹನ್ಕುಮಾರ್ ಎಂಬುವರು ಅ. 12ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ತಾಲ್ಲೂಕಿನ ಮಲ್ಲಸಂದ್ರಪಾಳ್ಯದ ನೆಂಟರ ಮನೆಗೆ ಹೋಗಿದ್ದರು. ಹಬ್ಬ ಮುಗಿಸಿಕೊಂಡು ಅ. 13ರಂದು ರಾತ್ರಿ ಮನೆಗೆ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.</p>.<p>ಮನೆಯ ಬೀಗ ಒಡೆದು ಒಳ ನುಗ್ಗಿ ಕಳ್ಳರು ₹1.40 ಲಕ್ಷ ನಗದು, ₹3.75 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಕಳ್ಳರ ಪತ್ತೆಗೆ ಕ್ರಮಕೈಗೊಳ್ಳುವಂತೆ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.</p>.<p>ಗ್ರಂಥಾಲಯ ಸಹಾಯಕರ ಮನೆಯಲ್ಲಿ ಕಳವು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಹನುಮಂತಪುರದ ಆರ್.ಮುನಿಕೃಷ್ಣಪ್ಪ ಎಂಬುವರ ಮನೆಯಲ್ಲಿ ₹10 ಸಾವಿರ ನಗದು, ₹1.38 ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ.</p>.<p>ಆರ್.ಮುನಿಕೃಷ್ಣಪ್ಪ ನಗರದ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಅ. 12ರಂದು ಮನೆಗೆ ಬೀಗ ಹಾಕಿಕೊಂಡು ಹಬ್ಬಕ್ಕಾಗಿ ಹೆಂಡತಿಯ ಊರು ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಗೆ ಹೋಗಿದ್ದರು. ಅ. 14ರಂದು ವಾಪಸ್ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.</p>.<p>ಕಳ್ಳರು ಬೀಗ ಒಡೆದು ಒಳ ಹೋಗಿ ಬೀರುವಿನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಬ್ಬದ ವೇಳೆ ಮನೆಗೆ ಬೀಗ ಹಾಕಿಕೊಂಡು ಎರಡು–ಮೂರು ದಿನ ಬೇರೆ ಊರಿಗೆ ಹೋಗುವವರು ಎಚ್ಚರಿಕೆ ವಹಿಸಬೇಕಿದೆ.</p>.<p>ವಿವಿಧೆಡೆ ದಸರಾ ಸಮಯದಲ್ಲಿ ಹೆಚ್ಚಿನ ಮನೆಗಳಲ್ಲಿ ಕಳ್ಳತನವಾಗಿದೆ. ಕಳ್ಳರು ಯಾರೂ ಇಲ್ಲದ ಮನೆಗಳನ್ನು ಗುರಿಯಾಗಿಸಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಕೈಗೆ ಸಿಕ್ಕಿದ್ದನ್ನು ದೋಚುತ್ತಿದ್ದಾರೆ. ಮನೆಯ ಮಾಲೀಕರು ಹಬ್ಬ ಮುಗಿಸಿಕೊಂಡು ಬಂದು ನೋಡಿದಾಗ ಕಳ್ಳತನ ಆಗಿರುವುದು ಕಂಡು ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ.</p>.<p>ಹನುಮಂತಪುರದ ಮೋಹನ್ಕುಮಾರ್ ಎಂಬುವರು ಅ. 12ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ತಾಲ್ಲೂಕಿನ ಮಲ್ಲಸಂದ್ರಪಾಳ್ಯದ ನೆಂಟರ ಮನೆಗೆ ಹೋಗಿದ್ದರು. ಹಬ್ಬ ಮುಗಿಸಿಕೊಂಡು ಅ. 13ರಂದು ರಾತ್ರಿ ಮನೆಗೆ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.</p>.<p>ಮನೆಯ ಬೀಗ ಒಡೆದು ಒಳ ನುಗ್ಗಿ ಕಳ್ಳರು ₹1.40 ಲಕ್ಷ ನಗದು, ₹3.75 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಕಳ್ಳರ ಪತ್ತೆಗೆ ಕ್ರಮಕೈಗೊಳ್ಳುವಂತೆ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ.</p>.<p>ಗ್ರಂಥಾಲಯ ಸಹಾಯಕರ ಮನೆಯಲ್ಲಿ ಕಳವು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಹನುಮಂತಪುರದ ಆರ್.ಮುನಿಕೃಷ್ಣಪ್ಪ ಎಂಬುವರ ಮನೆಯಲ್ಲಿ ₹10 ಸಾವಿರ ನಗದು, ₹1.38 ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದೆ.</p>.<p>ಆರ್.ಮುನಿಕೃಷ್ಣಪ್ಪ ನಗರದ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಅ. 12ರಂದು ಮನೆಗೆ ಬೀಗ ಹಾಕಿಕೊಂಡು ಹಬ್ಬಕ್ಕಾಗಿ ಹೆಂಡತಿಯ ಊರು ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಗೆ ಹೋಗಿದ್ದರು. ಅ. 14ರಂದು ವಾಪಸ್ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.</p>.<p>ಕಳ್ಳರು ಬೀಗ ಒಡೆದು ಒಳ ಹೋಗಿ ಬೀರುವಿನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>