ದೊಡ್ಡಹಳ್ಳಿ ಕಡೆಯಿಂದ ಪಳವಳ್ಳಿ ಕಡೆಗೆ ಹೋಗುತ್ತಿದ್ದ ದೊಡ್ಡತಿಮ್ಮಯ್ಯ ಎಂಬುವರಿಗೆ ಸೇರಿದ ಕುರಿ ಮಂದೆ ಮೇಲೆ ವೈ.ಎನ್ ಹೊಸಕೋಟೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಹರಿದಿದೆ. ಕುರಿಗಾಹಿ ದುಗ್ಗಪ್ಪ ಎಂಬುವರಿಗೆ ತೀವ್ರ ಗಾಯವಾಗಿದೆ. ಮೇವಿಗಾಗಿ ಆಂಧ್ರದ ಕದಿರಿದೇವರಪಲ್ಲಿಗೆ ಹೋಗಿ ಗ್ರಾಮಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.