<p><strong>ತುಮಕೂರು</strong>: ತುಮಕೂರು ಹಾಲು ಒಕ್ಕೂಟದಿಂದ ಪ್ರತಿ ನಿತ್ಯ 9.01 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಜಿಲ್ಲೆಯಲ್ಲಿ 1,345 ಸಹಕಾರ ಸಂಘಗಳು ಅಸ್ತಿತ್ವದಲ್ಲಿವೆ ಎಂದು ತುಮುಲ್ ಆಡಳಿತಾಧಿಕಾರಿ ಜಿ.ಉಮೇಶ್ ತಿಳಿಸಿದರು.</p>.<p>ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹಾಲು ದಿನ ಆಚರಣೆ ಪ್ರಯುಕ್ತ ಹಾಲು ಉತ್ಪಾದಕರ ಒಕ್ಕೂಟದಿಂದ ರೋಗಿಗಳಿಗೆ ಹಾಲು, ಬಿಸ್ಕೆಟ್, ಹಣ್ಣು ವಿತರಿಸಿ ಮಾತನಾಡಿದರು.</p>.<p>‘ಹಾಲಿನ ಮಹತ್ವ ತಿಳಿಸುವ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತದೆ. ಹಾಲಿನ ಉದ್ಯಮ ಮತ್ತು ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಜನರಲ್ಲಿ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತದೆ’ ಎಂದು ಹೇಳಿದರು.</p>.<p>ತುಮುಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸನ್, ‘ಪೌಷ್ಟಿಕಾಂಶ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಹಾಲು ವಿತರಣೆಯಿಂದ ಅನುಕೂಲವಾಗುತ್ತದೆ. ತುಮುಲ್ನಿಂದ 6.50 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ನಮ್ಮ ಒಕ್ಕೂಟದ ಹಾಲು ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಗೂ ಬಳಕೆಯಾಗುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ತುಮುಲ್ನ ಪ್ರಧಾನ ವ್ಯವಸ್ಥಾಪಕ ತಿಮ್ಮನಾಯಕ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ವಿದ್ಯಾನಂದ್, ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತುಮಕೂರು ಹಾಲು ಒಕ್ಕೂಟದಿಂದ ಪ್ರತಿ ನಿತ್ಯ 9.01 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಜಿಲ್ಲೆಯಲ್ಲಿ 1,345 ಸಹಕಾರ ಸಂಘಗಳು ಅಸ್ತಿತ್ವದಲ್ಲಿವೆ ಎಂದು ತುಮುಲ್ ಆಡಳಿತಾಧಿಕಾರಿ ಜಿ.ಉಮೇಶ್ ತಿಳಿಸಿದರು.</p>.<p>ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹಾಲು ದಿನ ಆಚರಣೆ ಪ್ರಯುಕ್ತ ಹಾಲು ಉತ್ಪಾದಕರ ಒಕ್ಕೂಟದಿಂದ ರೋಗಿಗಳಿಗೆ ಹಾಲು, ಬಿಸ್ಕೆಟ್, ಹಣ್ಣು ವಿತರಿಸಿ ಮಾತನಾಡಿದರು.</p>.<p>‘ಹಾಲಿನ ಮಹತ್ವ ತಿಳಿಸುವ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತದೆ. ಹಾಲಿನ ಉದ್ಯಮ ಮತ್ತು ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಜನರಲ್ಲಿ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತದೆ’ ಎಂದು ಹೇಳಿದರು.</p>.<p>ತುಮುಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸನ್, ‘ಪೌಷ್ಟಿಕಾಂಶ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಹಾಲು ವಿತರಣೆಯಿಂದ ಅನುಕೂಲವಾಗುತ್ತದೆ. ತುಮುಲ್ನಿಂದ 6.50 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ನಮ್ಮ ಒಕ್ಕೂಟದ ಹಾಲು ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಗೂ ಬಳಕೆಯಾಗುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ತುಮುಲ್ನ ಪ್ರಧಾನ ವ್ಯವಸ್ಥಾಪಕ ತಿಮ್ಮನಾಯಕ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ವಿದ್ಯಾನಂದ್, ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>