ಸಂಪ್ಗಳಲ್ಲಿ ಚರಂಡಿ ನೀರು ಸಂಗ್ರಹವಾಗಿದ್ದನ್ನು ಕಂಡ ವಿಜಯನಗರದ ನಿವಾಸಿಗಳು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಾದ್ಯಂತ ಈಗಾಗಲೇ ಡೆಂಗಿ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಸ್ವಚ್ಛತೆ, ಶುದ್ಧ ನೀರು ಪೂರೈಕೆಗೆ ಆದ್ಯತೆ ನೀಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶದ ಮಾತುಗಳನ್ನಾಡಿದರು.