<p><strong>ತುಮಕೂರು:</strong> ಪರಿಶಿಷ್ಟ ಸಮುದಾಯವನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿದೆ. ಆರ್ಥಿಕ, ಔದ್ಯೋಗಿಕ, ಸಾಮಾಜಿಕವಾಗಿ ಅವರನ್ನು ಸಶಕ್ತರನ್ನಾಗಿ ಮಾಡುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಇಲ್ಲಿ ಭಾನುವಾರ ಆರೋಪಿಸಿದರು.</p>.<p>ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಕೊಡುತ್ತಿಲ್ಲ. ಎಸ್ಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ. ಜಿಲ್ಲೆಯ ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಸಹಕಾರ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಕಾಂಗ್ರೆಸ್ನವರು ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸೋಲಿಸಿದರು. ಅವರ ಏಳಿಗೆಯನ್ನು ಸಹಿಸಲಿಲ್ಲ. ಅಂಬೇಡ್ಕರ್ ಅವರ ಹೋರಾಟಕ್ಕೆ ಯಾವತ್ತೂ ಬೆಂಬಲ ನೀಡಲಿಲ್ಲ. ಅಂಬೇಡ್ಕರ್ ಅಂತ್ಯ ಸಂಸ್ಕಾರ ಮಾಡಲು ಕಾಂಗ್ರೆಸ್ಗೆ ಒಂದು ಎಕರೆ ಜಾಗ ಕೊಡಲು ಶಕ್ತಿ ಇರಲಿಲ್ಲವೇ? ಎಂದು ಪ್ರಶ್ನಿಸಿದರು.</p>.<p>ಬಿಜೆಪಿ ಮುಖಂಡ ಡಾ.ಲಕ್ಷ್ಮಿಕಾಂತ್, ‘ಕಾಂಗ್ರೆಸ್ ದಲಿತ, ಸಂವಿಧಾನ ವಿರೋಧಿ ಪಕ್ಷ. ಕಾಂಗ್ರೆಸ್ ಅಂಬೇಡ್ಕರ್ ಆಶಯ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟರ ಮೀಸಲಾತಿ ಹೆಚ್ಚಿಸಿದೆ. ಹಲವು ವರ್ಷಗಳ ಬೇಡಿಕೆ, ಹೋರಾಟಕ್ಕೆ ಸ್ಪಂದಿಸಿದೆ’ ಎಂದರು.</p>.<p>ಬಿಜೆಪಿ ಮುಖಂಡ ಅನಿಲ್ಕುಮಾರ್, ‘ಕಾಂಗ್ರೆಸ್ ಹಲವು ವರ್ಷಗಳಿಂದ ಪರಿಶಿಷ್ಟರನ್ನು ಓಲೈಕೆ ಮಾಡಿಕೊಂಡು ಬಂದಿದೆ. ಚುನಾವಣೆ ನಂತರ ಅವರ ಕಡೆ ತಿರುಗಿಯೂ ನೋಡುವುದಿಲ್ಲ. ಈಗ ಸಹ ಅದೇ ತಂತ್ರಗಾರಿಕೆ ಮಾಡಲು ಹೊರಟಿದ್ದಾರೆ’ ಎಂದು ದೂರಿದರು.</p>.<p>ಬಿಜೆಪಿ ಮುಖಂಡರಾದ ಅಂಜಿನಪ್ಪ, ವೆಂಕಟೇಶ್, ಟಿ.ಆರ್.ಸದಾಶಿವಯ್ಯ, ಓಂಕಾರ್, ನಟರಾಜು, ಅಂಜನಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪರಿಶಿಷ್ಟ ಸಮುದಾಯವನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿದೆ. ಆರ್ಥಿಕ, ಔದ್ಯೋಗಿಕ, ಸಾಮಾಜಿಕವಾಗಿ ಅವರನ್ನು ಸಶಕ್ತರನ್ನಾಗಿ ಮಾಡುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಇಲ್ಲಿ ಭಾನುವಾರ ಆರೋಪಿಸಿದರು.</p>.<p>ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಕೊಡುತ್ತಿಲ್ಲ. ಎಸ್ಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ. ಜಿಲ್ಲೆಯ ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಸಹಕಾರ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಕಾಂಗ್ರೆಸ್ನವರು ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸೋಲಿಸಿದರು. ಅವರ ಏಳಿಗೆಯನ್ನು ಸಹಿಸಲಿಲ್ಲ. ಅಂಬೇಡ್ಕರ್ ಅವರ ಹೋರಾಟಕ್ಕೆ ಯಾವತ್ತೂ ಬೆಂಬಲ ನೀಡಲಿಲ್ಲ. ಅಂಬೇಡ್ಕರ್ ಅಂತ್ಯ ಸಂಸ್ಕಾರ ಮಾಡಲು ಕಾಂಗ್ರೆಸ್ಗೆ ಒಂದು ಎಕರೆ ಜಾಗ ಕೊಡಲು ಶಕ್ತಿ ಇರಲಿಲ್ಲವೇ? ಎಂದು ಪ್ರಶ್ನಿಸಿದರು.</p>.<p>ಬಿಜೆಪಿ ಮುಖಂಡ ಡಾ.ಲಕ್ಷ್ಮಿಕಾಂತ್, ‘ಕಾಂಗ್ರೆಸ್ ದಲಿತ, ಸಂವಿಧಾನ ವಿರೋಧಿ ಪಕ್ಷ. ಕಾಂಗ್ರೆಸ್ ಅಂಬೇಡ್ಕರ್ ಆಶಯ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟರ ಮೀಸಲಾತಿ ಹೆಚ್ಚಿಸಿದೆ. ಹಲವು ವರ್ಷಗಳ ಬೇಡಿಕೆ, ಹೋರಾಟಕ್ಕೆ ಸ್ಪಂದಿಸಿದೆ’ ಎಂದರು.</p>.<p>ಬಿಜೆಪಿ ಮುಖಂಡ ಅನಿಲ್ಕುಮಾರ್, ‘ಕಾಂಗ್ರೆಸ್ ಹಲವು ವರ್ಷಗಳಿಂದ ಪರಿಶಿಷ್ಟರನ್ನು ಓಲೈಕೆ ಮಾಡಿಕೊಂಡು ಬಂದಿದೆ. ಚುನಾವಣೆ ನಂತರ ಅವರ ಕಡೆ ತಿರುಗಿಯೂ ನೋಡುವುದಿಲ್ಲ. ಈಗ ಸಹ ಅದೇ ತಂತ್ರಗಾರಿಕೆ ಮಾಡಲು ಹೊರಟಿದ್ದಾರೆ’ ಎಂದು ದೂರಿದರು.</p>.<p>ಬಿಜೆಪಿ ಮುಖಂಡರಾದ ಅಂಜಿನಪ್ಪ, ವೆಂಕಟೇಶ್, ಟಿ.ಆರ್.ಸದಾಶಿವಯ್ಯ, ಓಂಕಾರ್, ನಟರಾಜು, ಅಂಜನಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>