<p><strong>ತುಮಕೂರು:</strong> ಜಿಲ್ಲೆಯಲ್ಲಿ ಜೆಡಿಎಸ್ಗೆ ತನ್ನದೇ ಇತಿಹಾಸ ಇದೆ. ಕಳೆದ ಚುನಾವಣೆಯಲ್ಲಿ ಮುಖಂಡರ ಗೊಂದಲದಿಂದ ಸೋಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಲಾಗುವುದು ಎಂದು ಮಾಜಿ ಶಾಸಕ ಎಚ್.ನಿಂಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಅವರನ್ನು ಮುಖಂಡರಾದ ಬೆಳಗುಂಬ ವೆಂಕಟೇಶ್, ಬಸವರಾಜು, ಶ್ರೀನಿವಾಸ್, ನರಸಿಂಹರಾಜು, ಟಿ.ಪಿ.ಮಂಜುನಾಥ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>‘ಸಣ್ಣ–ಪುಟ್ಟ ವೈಮನಸ್ಸಿನಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ನಮ್ಮ ಮನೆಗೆ ಬಂದು ಪಕ್ಷಕ್ಕೆ ಬರುವಂತೆ ಕೇಳಿದ್ದರು. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷಕ್ಕೆ ಮರಳಿದ್ದೇನೆ’ ಎಂದರು.</p>.<p>ಬೆಳಗುಂಬ ವೆಂಕಟೇಶ್, ‘ಹೆಬ್ಬೂರು- ಗೂಳೂರು ಏತ ನೀರಾವರಿ ಜಾರಿಯ ಹಿಂದೆ ನಿಂಗಪ್ಪ ಅವರ ಶ್ರಮವಿದೆ. ಏತ ನೀರಾವರಿಗಾಗಿ ದೇವಲಾಪುರದ ಕೆರೆಯಿಂದ ಗೂಳೂರಿನ ವರೆಗೆ ಪಾದಯಾತ್ರೆ ನಡೆಸಿದ್ದರು. ಇದರ ಫಲವಾಗಿ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಯೋಜನೆಗೆ ಚಾಲನೆ ದೊರೆಯಿತು’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ ಜೆಡಿಎಸ್ಗೆ ತನ್ನದೇ ಇತಿಹಾಸ ಇದೆ. ಕಳೆದ ಚುನಾವಣೆಯಲ್ಲಿ ಮುಖಂಡರ ಗೊಂದಲದಿಂದ ಸೋಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಲಾಗುವುದು ಎಂದು ಮಾಜಿ ಶಾಸಕ ಎಚ್.ನಿಂಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಅವರನ್ನು ಮುಖಂಡರಾದ ಬೆಳಗುಂಬ ವೆಂಕಟೇಶ್, ಬಸವರಾಜು, ಶ್ರೀನಿವಾಸ್, ನರಸಿಂಹರಾಜು, ಟಿ.ಪಿ.ಮಂಜುನಾಥ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>‘ಸಣ್ಣ–ಪುಟ್ಟ ವೈಮನಸ್ಸಿನಿಂದ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ನಮ್ಮ ಮನೆಗೆ ಬಂದು ಪಕ್ಷಕ್ಕೆ ಬರುವಂತೆ ಕೇಳಿದ್ದರು. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷಕ್ಕೆ ಮರಳಿದ್ದೇನೆ’ ಎಂದರು.</p>.<p>ಬೆಳಗುಂಬ ವೆಂಕಟೇಶ್, ‘ಹೆಬ್ಬೂರು- ಗೂಳೂರು ಏತ ನೀರಾವರಿ ಜಾರಿಯ ಹಿಂದೆ ನಿಂಗಪ್ಪ ಅವರ ಶ್ರಮವಿದೆ. ಏತ ನೀರಾವರಿಗಾಗಿ ದೇವಲಾಪುರದ ಕೆರೆಯಿಂದ ಗೂಳೂರಿನ ವರೆಗೆ ಪಾದಯಾತ್ರೆ ನಡೆಸಿದ್ದರು. ಇದರ ಫಲವಾಗಿ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಯೋಜನೆಗೆ ಚಾಲನೆ ದೊರೆಯಿತು’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>