<p><strong>ತುಮಕೂರು:</strong> ಅರ್ಜುನ ಆನೆ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಗಂಧದಗುಡಿ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>‘ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆ ನಾಡಿನ ಜನರ ಪ್ರೀತಿ ಗಳಿಸಿತ್ತು. ವಯಸ್ಸಾಗಿದ್ದ ಆನೆಯನ್ನು ಕಾಡಾನೆಗಳನ್ನು ಪಳಗಿಸಲು ಬಳಸಿದ್ದು ಅಮಾನವೀಯ. ಕಾರ್ಯಾಚರಣೆ ಸಮಯದಲ್ಲಿ ಅರ್ಜುನ ಆನೆಗೆ ಗುಂಡು ಬಿದ್ದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಕುರಿತು ನಿಖರವಾಗಿ ತನಿಖೆ ನಡೆಸಬೇಕು’ ಎಂದು ಫೌಂಡೇಶನ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ರೆಡ್ಡಿ ಒತ್ತಾಯಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಇತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿ ಉಪವಿಭಾಗಾಧಿಕಾರಿ ಗೌರವ್ಕುಮಾರ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಫೌಂಡೇಷನ್ ಗೌರವಾಧ್ಯಕ್ಷ ಬಿ.ಎಸ್.ಪ್ರಕಾಶ್, ಉಪಾಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಮೋಹನ್ಕುಮಾರ್, ಖಜಾಂಚಿ ಚಂದ್ರಶೇಖರ್, ಪದಾಧಿಕಾರಿಗಳಾದ ನವೀನ್ಕುಮಾರ್, ಜಿ.ಎಸ್.ಗೌಡ, ಈರಣ್ಣ, ಲೋಹಿತ್, ಪ್ರಕಾಶ್, ಮಧು, ನೀಲಕಂಠಪ್ಪ, ಯೋಗೇಶ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅರ್ಜುನ ಆನೆ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಗಂಧದಗುಡಿ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>‘ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆ ನಾಡಿನ ಜನರ ಪ್ರೀತಿ ಗಳಿಸಿತ್ತು. ವಯಸ್ಸಾಗಿದ್ದ ಆನೆಯನ್ನು ಕಾಡಾನೆಗಳನ್ನು ಪಳಗಿಸಲು ಬಳಸಿದ್ದು ಅಮಾನವೀಯ. ಕಾರ್ಯಾಚರಣೆ ಸಮಯದಲ್ಲಿ ಅರ್ಜುನ ಆನೆಗೆ ಗುಂಡು ಬಿದ್ದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಕುರಿತು ನಿಖರವಾಗಿ ತನಿಖೆ ನಡೆಸಬೇಕು’ ಎಂದು ಫೌಂಡೇಶನ್ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ರೆಡ್ಡಿ ಒತ್ತಾಯಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಇತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿ ಉಪವಿಭಾಗಾಧಿಕಾರಿ ಗೌರವ್ಕುಮಾರ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಫೌಂಡೇಷನ್ ಗೌರವಾಧ್ಯಕ್ಷ ಬಿ.ಎಸ್.ಪ್ರಕಾಶ್, ಉಪಾಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಮೋಹನ್ಕುಮಾರ್, ಖಜಾಂಚಿ ಚಂದ್ರಶೇಖರ್, ಪದಾಧಿಕಾರಿಗಳಾದ ನವೀನ್ಕುಮಾರ್, ಜಿ.ಎಸ್.ಗೌಡ, ಈರಣ್ಣ, ಲೋಹಿತ್, ಪ್ರಕಾಶ್, ಮಧು, ನೀಲಕಂಠಪ್ಪ, ಯೋಗೇಶ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>