ತಾಲ್ಲೂಕಿನಲ್ಲಿ 108 ಶಾಲಾ ಕೊಠಡಿಗಳು ಸಂಪೂರ್ಣ ಶಿಥಿಲವಾಗಿವೆ. ಅವುಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಶಿಥಿಲವಾಗಿರುವ ಮತ್ತು ದುರಸ್ತಿ ಮಾಡಬೇಕಿರುವ ಶಾಲೆಗಳ ಪಟ್ಟಿ ಮಾಡಿದ್ದು ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಕೆಲವು ಶಾಲೆಗಳಲ್ಲಿ ಕೊಠಡಿಗಳನ್ನು ದುರಸ್ತಿಗೊಳಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
–ಸಿ.ಎನ್.ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ
ಸರ್ಕಾರ ಕೇವಲ ಉಚಿತ ಶಿಕ್ಷಣ ನೀಡುತ್ತೇವೆ ಎಂದು ಹೇಳುವ ಬದಲು ಕಲಿಕೆಗೆ ಅಗತ್ಯ ಸೌಕರ್ಯ ಒದಗಿಸಬೇಕು. ಬೀಳುವ ಹಂತದಲ್ಲಿರುವ ಕೊಠಡಿಗಳಲ್ಲಿ ಶಾಲೆ ನಡೆಸಿದರೆ ಭಯದಲ್ಲಿ ಮಕ್ಕಳು ಏನು ಕಲಿಯಲು ಸಾಧ್ಯ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಹೊಸ ಕಟ್ಟಡಗಳನ್ನು ನಿರ್ಮಿಸಿ ಶಿಕ್ಷಕರನ್ನು ನೇಮಿಸಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಿದರೆ ಎಲ್ಲರೂ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವರು.
–ಪ್ರದೀಪ್, ದ್ವಾರಾಳು
ಹಲವು ಕಡೆ ಮೂಲ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಸುಧಾರಿಸಬೇಕು. ಹೊಸ ಕಟ್ಟಡಗಳ ನಿರ್ಮಾಣ ಮಾಡುವ ಮೂಲಕ ಶಿಕ್ಷಕರನ್ನು ನೇಮಕ ಮಾಡಿ ಪೋಷಕರನ್ನು ಆಕರ್ಷಿಸಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ.