<p><strong>ತುಮಕೂರು</strong>: ಗಿಡ, ಮರ ನೆಡುವುದರಿಂದಷ್ಟೇ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಕೊಳೆಯದ ತ್ಯಾಜ್ಯ ಭೂತಾಯಿ ಒಡಲು ಸೇರದಂತೆ ನೋಡಿಕೊಳ್ಳಬೇಕು. ಮಣ್ಣು, ಗಾಳಿ, ನೀರು ಕಲುಷಿತವಾಗದಂತೆ ಎಚ್ಚರ ವಹಿಸಬೇಕು ಎಂದು ವಲಯ ಅರಣ್ಯಾಧಿಕಾರಿ ಪವಿತ್ರ ಸಲಹೆ ಮಾಡಿದರು.</p>.<p>ನಗರದ ಕೆಎಸ್ಆರ್ಟಿಸಿ ಕಾರ್ಯಾಗಾರ ಘಟಕ-2ರಲ್ಲಿ ಬುಧವಾರ ಕನ್ನಡ ಕ್ರಿಯಾ ಸಮಿತಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.</p>.<p>ಕೆಎಸ್ಆರ್ಟಿಸಿ ಸಂಸ್ಥೆಯಿಂದಲೂ ಸಾಕಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದರ ಸೂಕ್ತ ನಿರ್ವಹಣೆ ಮಾಡಬೇಕು. ಬಸ್ ನಿಲ್ದಾಣಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಪರಿಸರಕ್ಕೆ ಹಾನಿಯಾಗದಂತೆ ವಿಂಗಡಿಸಿ, ವಿಲೇವಾರಿ ಮಾಡಬೇಕು ಎಂದು ಹೇಳಿದರು.</p>.<p>ಪ್ರವಚನಕಾರ ಮುರುಳೀಕೃಷ್ಣ, ‘ಪರಿಸರದ ಮೇಲೆ ಉಂಟುಮಾಡುತ್ತಿರುವ ಹಾನಿಯಿಂದಾಗಿ ಸಾಕಷ್ಟು ದುಷ್ಪರಿಣಾಮ ಎದುರಿಸುತ್ತಿದ್ದೇವೆ. ಇದರ ಪರಿಣಾಮವಾಗಿ ಹಲವು ನಗರ ಪ್ರದೇಶಗಳಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್ ದಾಟಿದೆ. ಪರಿಸರ ಸಂರಕ್ಷಣೆಯಿಂದಷ್ಟೇ ಇಂತಹ ಅನಾಹುತ ತಡೆಗಟ್ಟಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>ನಿವೃತ್ತ ಪ್ರಾಧ್ಯಾಪಕ ಸಿದ್ದೇಶಗೌಡ, ‘ಐಷಾರಾಮಿ ಜೀವನ ತ್ಯಜಿಸಿ ಸಾರ್ವಜನಿಕ ಸಾರಿಗೆ ಬಳಸಬೇಕು’ ಎಂದರು.</p>.<p>ಕೆಎಸ್ಆರ್ಟಿಸಿ ಕಾರ್ಯಾಗಾರದ ವ್ಯವಸ್ಥಾಪಕ ಮಂಜುನಾಥ್, ‘ಸಂಸ್ಥೆ ಸಹ ಕಡಿಮೆ ಹೊಗೆ ಉಗುಳುವ ವಾಹನಗಳನ್ನು ಓಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದು ಹೇಳಿದರು.</p>.<p>ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಡಿ.ಹನುಮಂತರಾಯಪ್ಪ, ಸಾಹಿತಿಗಳಾದ ಬಾಪೂಜ, ಮಹದೇವಪ್ಪ, ಸಮಿತಿ ಉಪಾಧ್ಯಕ್ಷ ಮಂಜುನಾಥ್, ನಿಗಮದ ಅಧಿಕಾರಿಗಳಾದ ಆಸೀಫ್ವುಲ್ಲಾ, ಬಿಟಿಒ ಬಸವರಾಜು, ಅಡಳಿತಾಧಿಕಾರಿ ಬಸವರಾಜು, ಹೊನ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಗಿಡ, ಮರ ನೆಡುವುದರಿಂದಷ್ಟೇ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಕೊಳೆಯದ ತ್ಯಾಜ್ಯ ಭೂತಾಯಿ ಒಡಲು ಸೇರದಂತೆ ನೋಡಿಕೊಳ್ಳಬೇಕು. ಮಣ್ಣು, ಗಾಳಿ, ನೀರು ಕಲುಷಿತವಾಗದಂತೆ ಎಚ್ಚರ ವಹಿಸಬೇಕು ಎಂದು ವಲಯ ಅರಣ್ಯಾಧಿಕಾರಿ ಪವಿತ್ರ ಸಲಹೆ ಮಾಡಿದರು.</p>.<p>ನಗರದ ಕೆಎಸ್ಆರ್ಟಿಸಿ ಕಾರ್ಯಾಗಾರ ಘಟಕ-2ರಲ್ಲಿ ಬುಧವಾರ ಕನ್ನಡ ಕ್ರಿಯಾ ಸಮಿತಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.</p>.<p>ಕೆಎಸ್ಆರ್ಟಿಸಿ ಸಂಸ್ಥೆಯಿಂದಲೂ ಸಾಕಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದರ ಸೂಕ್ತ ನಿರ್ವಹಣೆ ಮಾಡಬೇಕು. ಬಸ್ ನಿಲ್ದಾಣಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಪರಿಸರಕ್ಕೆ ಹಾನಿಯಾಗದಂತೆ ವಿಂಗಡಿಸಿ, ವಿಲೇವಾರಿ ಮಾಡಬೇಕು ಎಂದು ಹೇಳಿದರು.</p>.<p>ಪ್ರವಚನಕಾರ ಮುರುಳೀಕೃಷ್ಣ, ‘ಪರಿಸರದ ಮೇಲೆ ಉಂಟುಮಾಡುತ್ತಿರುವ ಹಾನಿಯಿಂದಾಗಿ ಸಾಕಷ್ಟು ದುಷ್ಪರಿಣಾಮ ಎದುರಿಸುತ್ತಿದ್ದೇವೆ. ಇದರ ಪರಿಣಾಮವಾಗಿ ಹಲವು ನಗರ ಪ್ರದೇಶಗಳಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್ ದಾಟಿದೆ. ಪರಿಸರ ಸಂರಕ್ಷಣೆಯಿಂದಷ್ಟೇ ಇಂತಹ ಅನಾಹುತ ತಡೆಗಟ್ಟಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>ನಿವೃತ್ತ ಪ್ರಾಧ್ಯಾಪಕ ಸಿದ್ದೇಶಗೌಡ, ‘ಐಷಾರಾಮಿ ಜೀವನ ತ್ಯಜಿಸಿ ಸಾರ್ವಜನಿಕ ಸಾರಿಗೆ ಬಳಸಬೇಕು’ ಎಂದರು.</p>.<p>ಕೆಎಸ್ಆರ್ಟಿಸಿ ಕಾರ್ಯಾಗಾರದ ವ್ಯವಸ್ಥಾಪಕ ಮಂಜುನಾಥ್, ‘ಸಂಸ್ಥೆ ಸಹ ಕಡಿಮೆ ಹೊಗೆ ಉಗುಳುವ ವಾಹನಗಳನ್ನು ಓಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದು ಹೇಳಿದರು.</p>.<p>ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಡಿ.ಹನುಮಂತರಾಯಪ್ಪ, ಸಾಹಿತಿಗಳಾದ ಬಾಪೂಜ, ಮಹದೇವಪ್ಪ, ಸಮಿತಿ ಉಪಾಧ್ಯಕ್ಷ ಮಂಜುನಾಥ್, ನಿಗಮದ ಅಧಿಕಾರಿಗಳಾದ ಆಸೀಫ್ವುಲ್ಲಾ, ಬಿಟಿಒ ಬಸವರಾಜು, ಅಡಳಿತಾಧಿಕಾರಿ ಬಸವರಾಜು, ಹೊನ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>