<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್. ರಾಂಪುರದಲ್ಲಿ ಬುಧವಾರ ಮಧ್ಯರಾತ್ರಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಗೆ ಬೆಂಕಿ ಹಚ್ಚಿದ್ದು, ಕೊಬ್ಬರಿ, ಟ್ರ್ಯಾಕ್ಟರ್, ದ್ವಿಚಕ್ರ ವಾಹನ ಭಸ್ಮವಾಗಿದೆ.</p><p>ಶಿವಗಂಗಮ್ಮ ಅವರು ತಮ್ಮ ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದರು. ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ ನಿರ್ಮಿಸಿದ್ದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.</p><p>ಶೆಡ್ನಲ್ಲಿದ್ದ ಸುಮಾರು 30 ಸಾವಿರ ಕೊಬ್ಬರಿ, ಟ್ರ್ಯಾಕ್ಟರ್, ಬೈಕ್ ಹಾಗೂ ಕೃಷಿ ಪರಿಕರಗಳು ಸುಟ್ಟು ಹೋಗಿವೆ. ‘ಬರದ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದ ನಮಗೆ ಈ ಅವಘಡ ತುಂಬಾ ಸಂಕಷ್ಟ ತಂದೊಡ್ಡಿದೆ. ಏನಾದರೂ ಪರಿಹಾರ ಸಿಕ್ಕರೆ ಮತ್ತೆ ಬದುಕು ಕಟ್ಟಿಕೊಳ್ಳಬಹುದು’ ಎಂದು ರೈತ ಮಹಿಳೆ ಶಿವಗಂಗಮ್ಮ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್. ರಾಂಪುರದಲ್ಲಿ ಬುಧವಾರ ಮಧ್ಯರಾತ್ರಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಗೆ ಬೆಂಕಿ ಹಚ್ಚಿದ್ದು, ಕೊಬ್ಬರಿ, ಟ್ರ್ಯಾಕ್ಟರ್, ದ್ವಿಚಕ್ರ ವಾಹನ ಭಸ್ಮವಾಗಿದೆ.</p><p>ಶಿವಗಂಗಮ್ಮ ಅವರು ತಮ್ಮ ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದರು. ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ ನಿರ್ಮಿಸಿದ್ದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.</p><p>ಶೆಡ್ನಲ್ಲಿದ್ದ ಸುಮಾರು 30 ಸಾವಿರ ಕೊಬ್ಬರಿ, ಟ್ರ್ಯಾಕ್ಟರ್, ಬೈಕ್ ಹಾಗೂ ಕೃಷಿ ಪರಿಕರಗಳು ಸುಟ್ಟು ಹೋಗಿವೆ. ‘ಬರದ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದ ನಮಗೆ ಈ ಅವಘಡ ತುಂಬಾ ಸಂಕಷ್ಟ ತಂದೊಡ್ಡಿದೆ. ಏನಾದರೂ ಪರಿಹಾರ ಸಿಕ್ಕರೆ ಮತ್ತೆ ಬದುಕು ಕಟ್ಟಿಕೊಳ್ಳಬಹುದು’ ಎಂದು ರೈತ ಮಹಿಳೆ ಶಿವಗಂಗಮ್ಮ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>