<p>ತುಮಕೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು. ನರೇಗಾ ಯೋಜನೆಯಲ್ಲಿ 200 ದಿನ ಕೆಲಸ ನೀಡಬೇಕು. ಹೆಚ್ಚುವರಿ ಪಡಿತರ ಧಾನ್ಯ ಒದಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಒತ್ತಾಯಿಸಿದರು.</p>.<p>ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು, ಮಾಮೂಲಿಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಜಾನುವಾರುಗಳಿಗೆ ಮೇವು, ನೀರಿನ ಅಭಾವ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಆಗ್ರಹಿಸಿದರು.</p>.<p>ಯಾವುದೇ ರೈತರನ್ನು ವಾಪಸ್ ಕಳುಹಿಸದೆ ಕೊಬ್ಬರಿ ಖರೀದಿಗೆ ನೋಂದಣಿ ಮಾಡಿಕೊಳ್ಳಬೇಕು. ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೊಬ್ಬರಿ ಮಿತಿ ಹೆಚ್ಚಿಸಬೇಕು. ಬೇಡಿಕೆ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಳಿ ನಡೆಸುತ್ತಿರುವುದನ್ನು ಖಂಡಿಸಿದರು.</p>.<p>ರೈತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಐತಿಹಾಸಿಕ ಚಳವಳಿ ಸಮಯದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 14ರಂದು ನವದೆಹಲಿಯಲ್ಲಿ ಕಿಸಾನ್ ಮಜ್ದೂರ್ ಮಹಾ ಪಂಚಾಯತ್ ನಡೆಯಲಿದೆ. ರಾಜ್ಯದ ರೈತರು ಸಹ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಕೆಪಿಆರ್ಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಉಮೇಶ್, ಜಿಲ್ಲಾ ಸಹ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು. ನರೇಗಾ ಯೋಜನೆಯಲ್ಲಿ 200 ದಿನ ಕೆಲಸ ನೀಡಬೇಕು. ಹೆಚ್ಚುವರಿ ಪಡಿತರ ಧಾನ್ಯ ಒದಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಒತ್ತಾಯಿಸಿದರು.</p>.<p>ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು, ಮಾಮೂಲಿಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಜಾನುವಾರುಗಳಿಗೆ ಮೇವು, ನೀರಿನ ಅಭಾವ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಆಗ್ರಹಿಸಿದರು.</p>.<p>ಯಾವುದೇ ರೈತರನ್ನು ವಾಪಸ್ ಕಳುಹಿಸದೆ ಕೊಬ್ಬರಿ ಖರೀದಿಗೆ ನೋಂದಣಿ ಮಾಡಿಕೊಳ್ಳಬೇಕು. ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೊಬ್ಬರಿ ಮಿತಿ ಹೆಚ್ಚಿಸಬೇಕು. ಬೇಡಿಕೆ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಳಿ ನಡೆಸುತ್ತಿರುವುದನ್ನು ಖಂಡಿಸಿದರು.</p>.<p>ರೈತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಐತಿಹಾಸಿಕ ಚಳವಳಿ ಸಮಯದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 14ರಂದು ನವದೆಹಲಿಯಲ್ಲಿ ಕಿಸಾನ್ ಮಜ್ದೂರ್ ಮಹಾ ಪಂಚಾಯತ್ ನಡೆಯಲಿದೆ. ರಾಜ್ಯದ ರೈತರು ಸಹ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಕೆಪಿಆರ್ಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಉಮೇಶ್, ಜಿಲ್ಲಾ ಸಹ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>