<p><strong>ತುಮಕೂರು:</strong> ಆಡಳಿತಾತ್ಮಕ ಮತ್ತು ಜನರ ಹಿತದೃಷ್ಟಿಯಿಂದ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಒತ್ತಾಯಿಸಿದರು.</p>.<p>ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ‘ವಿಶ್ವವಿದ್ಯಾಲಯಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ವಿ.ವಿಗಳಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಿದರೆ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ನಾಡು, ಇಲ್ಲಿನ ವೈವಿಧ್ಯತೆ ಅರ್ಥ ಮಾಡಿಕೊಂಡವರಿಗೆ ಸಂವಿಧಾನದ ಮಹತ್ವ ತಿಳಿಯುತ್ತದೆ. ಪ್ರಸ್ತುತ ನಾವು ಎಲ್ಲಿಗೆ ತಲುಪಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ನಮ್ಮದು ಬಹುತ್ವ ಭಾರತ ಎಂದು ಅರ್ಥ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.</p>.<p>ಪರೋಪಕಾರಿ ಮನೋಭಾವ ಅರಳಬೇಕು. ಕಾನೂನು ರೂಪಿಸುವಾಗ, ಅಭಿವೃದ್ಧಿ ಕಾರ್ಯ ನಡೆಯುವಾಗ, ಅಳವಡಿಸಿದ ಯೋಜನೆಗಳ ಗುಣಮಟ್ಟ ಪ್ರಶ್ನಿಸುವಾಗ, ಜನರ ಧ್ವನಿಯಾಗಿ ಮಾಧ್ಯಮ ತನ್ನ ಕರ್ತವ್ಯ ನಿರ್ವಹಿಸುವಾಗ ಸಮಾಜದ ಆಶಯಗಳನ್ನು ಅರಿಯಬೇಕು ಎಂದು ಸಲಹೆ ಮಾಡಿದರು.</p>.<p>ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಕೆ.ಪ್ರಸನ್ನಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯೋಜಕ ಎ.ಎಂ.ಮಂಜುನಾಥ್, ಸಹಾಯಕ ಪ್ರಾಧ್ಯಾಪಕ ಕೆ.ವಿ.ಸಿಬಂತಿ ಪದ್ಮನಾಭ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಆಡಳಿತಾತ್ಮಕ ಮತ್ತು ಜನರ ಹಿತದೃಷ್ಟಿಯಿಂದ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಒತ್ತಾಯಿಸಿದರು.</p>.<p>ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ‘ವಿಶ್ವವಿದ್ಯಾಲಯಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ವಿ.ವಿಗಳಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಿದರೆ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ನಾಡು, ಇಲ್ಲಿನ ವೈವಿಧ್ಯತೆ ಅರ್ಥ ಮಾಡಿಕೊಂಡವರಿಗೆ ಸಂವಿಧಾನದ ಮಹತ್ವ ತಿಳಿಯುತ್ತದೆ. ಪ್ರಸ್ತುತ ನಾವು ಎಲ್ಲಿಗೆ ತಲುಪಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ನಮ್ಮದು ಬಹುತ್ವ ಭಾರತ ಎಂದು ಅರ್ಥ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.</p>.<p>ಪರೋಪಕಾರಿ ಮನೋಭಾವ ಅರಳಬೇಕು. ಕಾನೂನು ರೂಪಿಸುವಾಗ, ಅಭಿವೃದ್ಧಿ ಕಾರ್ಯ ನಡೆಯುವಾಗ, ಅಳವಡಿಸಿದ ಯೋಜನೆಗಳ ಗುಣಮಟ್ಟ ಪ್ರಶ್ನಿಸುವಾಗ, ಜನರ ಧ್ವನಿಯಾಗಿ ಮಾಧ್ಯಮ ತನ್ನ ಕರ್ತವ್ಯ ನಿರ್ವಹಿಸುವಾಗ ಸಮಾಜದ ಆಶಯಗಳನ್ನು ಅರಿಯಬೇಕು ಎಂದು ಸಲಹೆ ಮಾಡಿದರು.</p>.<p>ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಕೆ.ಪ್ರಸನ್ನಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯೋಜಕ ಎ.ಎಂ.ಮಂಜುನಾಥ್, ಸಹಾಯಕ ಪ್ರಾಧ್ಯಾಪಕ ಕೆ.ವಿ.ಸಿಬಂತಿ ಪದ್ಮನಾಭ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>