ಸಭೆಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಶ್ರೀನಿವಾಸ್ ವಿರುದ್ಧ ವಾಗ್ದಾಳಿ ನಡೆಸಿದರು. ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಎಚ್.ಡಿ. ದೇವೇಗೌಡ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಚಿತಾವಣೆ ಮಾಡಿದರು. ಕಾಂಗ್ರೆಸ್– ಜೆಡಿಎಸ್ ಹೊಂದಾಣಿಕೆಯಿಂದ ಗೌಡರು ಸ್ಪರ್ಧಿಸಿದ್ದರೆ, ಆ ಪಕ್ಷದ ಕೆಲವರು ಸೋಲಿಸಲು ಪಿತೂರಿ ನಡೆಸಿದ್ದರು. ಅಂತಹವರ ಜತೆ ಸೇರಿಕೊಂಡು ಸೋಲಿಸಿದರು. ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಮಧ್ಯರಾತ್ರಿ ಕುಳಿತು ಏನೆಲ್ಲಮಸಲತ್ತು ಮಾಡಿದರು ಎಂಬುದು ಗೊತ್ತಿದೆ’ ಎಂದು ಆರೋಪಿಸಿದರು.