<p><strong>ತುಮಕೂರು</strong>: ವೀಚಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ 2023ನೇ ಸಾಲಿನ ‘ವೀಚಿ ಸಾಹಿತ್ಯ ಪ್ರಶಸ್ತಿ’ಗೆ ಬಿ.ಜನಾರ್ದನ ಭಟ್ ಅವರ 'ವಿನೂತನ ಕಥನ ಕಾರಣ' (ವಿಮರ್ಶೆ) ಹಾಗೂ ರವಿಕುಮಾರ್ ನೀಹ ಅವರ 'ಅರಸು ಕುರನ್ಗರಾಯ' (ಸಂಶೋಧನೆ) ಕೃತಿಗಳು ಆಯ್ಕೆಯಾಗಿವೆ.</p>.<p>ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿಗೆ ಎರಡು ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಮೊತ್ತವನ್ನು ಇಬ್ಬರು ಲೇಖಕರಿಗೂ ಸಮನಾಗಿ ನೀಡಲಾಗುತ್ತದೆ.</p>.<p>ವೀಚಿ ಯುವ ಪ್ರಶಸ್ತಿಗೆ ದಯಾನಂದ ಅವರ 'ಬುದ್ಧನ ಕಿವಿ' (ಕತೆಗಳು) ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹5 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.</p>.<p>ಸಾಹಿತಿಗಳಾದ ಎಚ್.ದಂಡಪ್ಪ, ಎಸ್.ಗಂಗಾಧರಯ್ಯ, ಗೀತಾ ವಸಂತ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಪ್ರಶಸ್ತಿಗೆ ಕೃತಿಗಳನ್ನು ಆಯ್ಕೆ ಮಾಡಿದೆ ಎಂದು ವೀಚಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವೀಚಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ 2023ನೇ ಸಾಲಿನ ‘ವೀಚಿ ಸಾಹಿತ್ಯ ಪ್ರಶಸ್ತಿ’ಗೆ ಬಿ.ಜನಾರ್ದನ ಭಟ್ ಅವರ 'ವಿನೂತನ ಕಥನ ಕಾರಣ' (ವಿಮರ್ಶೆ) ಹಾಗೂ ರವಿಕುಮಾರ್ ನೀಹ ಅವರ 'ಅರಸು ಕುರನ್ಗರಾಯ' (ಸಂಶೋಧನೆ) ಕೃತಿಗಳು ಆಯ್ಕೆಯಾಗಿವೆ.</p>.<p>ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿಗೆ ಎರಡು ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಮೊತ್ತವನ್ನು ಇಬ್ಬರು ಲೇಖಕರಿಗೂ ಸಮನಾಗಿ ನೀಡಲಾಗುತ್ತದೆ.</p>.<p>ವೀಚಿ ಯುವ ಪ್ರಶಸ್ತಿಗೆ ದಯಾನಂದ ಅವರ 'ಬುದ್ಧನ ಕಿವಿ' (ಕತೆಗಳು) ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹5 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.</p>.<p>ಸಾಹಿತಿಗಳಾದ ಎಚ್.ದಂಡಪ್ಪ, ಎಸ್.ಗಂಗಾಧರಯ್ಯ, ಗೀತಾ ವಸಂತ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಪ್ರಶಸ್ತಿಗೆ ಕೃತಿಗಳನ್ನು ಆಯ್ಕೆ ಮಾಡಿದೆ ಎಂದು ವೀಚಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>