<p><strong>ಗುಬ್ಬಿ:</strong> ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಗಳ ಬಗ್ಗೆ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಕಾಯಿ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶೆ ವಿನುತಾ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಕ್ಕಳಿಗೆ ನೀಡುವ ಆಹಾರಧಾನ್ಯ ಹಾಗೂ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಮಕ್ಕಳಿಗೆ ತಿಂಡಿ ನೀಡಲು ಬಳಸುವ ರೆವೆಯಲ್ಲಿ ಇರುವೆಗಳನ್ನು ಗಮನಿಸಿದ ನ್ಯಾಯಾಧೀಶೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಮಕ್ಕಳಿಗೆ ನೀಡುವ ಆಹಾರದಲ್ಲಿ ಎಲ್ಲ ಪೌಷ್ಟಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಬಳಸಬೇಕು. ಅಡುಗೆ ಮಾಡಲು ಬಳಸುವ ಪಾತ್ರೆ ಹಾಗೂ ಕೊಠಡಿಯನ್ನು ಸ್ವಚ್ಛವಾಗಿಟ್ಟುಕೊಂಡು, ಅಡುಗೆಗೆ ಶುದ್ಧ ನೀರನ್ನು ಬಳಸಬೇಕು ಎಂದು ಸೂಚಿಸಿದರು.</p>.<p>ಅಂಗನವಾಡಿಗಳ ಬಗ್ಗೆ ಯಾವುದೇ ದೂರು ಬಂದಲ್ಲಿ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಅಂಗನವಾಡಿ ಪರಿಸರವನ್ನು ಇಟ್ಟುಕೊಳ್ಳಬೇಕು. ಸರ್ಕಾರ ಒದಗಿಸುವ ಪೌಷ್ಟಿಕ ಆಹಾರದ ಕಿಟ್ಗಳನ್ನು ವ್ಯವಸ್ಥಿತವಾಗಿ ಮಕ್ಕಳಿಗೆ ನೀಡಬೇಕು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುವಂತೆ ಆಗಬಾರದು. ಮಗುವಿನ ಬೆಳವಣಿಗೆ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಕೃಷ್ಣ, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಗಳ ಬಗ್ಗೆ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಕಾಯಿ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶೆ ವಿನುತಾ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಕ್ಕಳಿಗೆ ನೀಡುವ ಆಹಾರಧಾನ್ಯ ಹಾಗೂ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಮಕ್ಕಳಿಗೆ ತಿಂಡಿ ನೀಡಲು ಬಳಸುವ ರೆವೆಯಲ್ಲಿ ಇರುವೆಗಳನ್ನು ಗಮನಿಸಿದ ನ್ಯಾಯಾಧೀಶೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಮಕ್ಕಳಿಗೆ ನೀಡುವ ಆಹಾರದಲ್ಲಿ ಎಲ್ಲ ಪೌಷ್ಟಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಬಳಸಬೇಕು. ಅಡುಗೆ ಮಾಡಲು ಬಳಸುವ ಪಾತ್ರೆ ಹಾಗೂ ಕೊಠಡಿಯನ್ನು ಸ್ವಚ್ಛವಾಗಿಟ್ಟುಕೊಂಡು, ಅಡುಗೆಗೆ ಶುದ್ಧ ನೀರನ್ನು ಬಳಸಬೇಕು ಎಂದು ಸೂಚಿಸಿದರು.</p>.<p>ಅಂಗನವಾಡಿಗಳ ಬಗ್ಗೆ ಯಾವುದೇ ದೂರು ಬಂದಲ್ಲಿ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಅಂಗನವಾಡಿ ಪರಿಸರವನ್ನು ಇಟ್ಟುಕೊಳ್ಳಬೇಕು. ಸರ್ಕಾರ ಒದಗಿಸುವ ಪೌಷ್ಟಿಕ ಆಹಾರದ ಕಿಟ್ಗಳನ್ನು ವ್ಯವಸ್ಥಿತವಾಗಿ ಮಕ್ಕಳಿಗೆ ನೀಡಬೇಕು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುವಂತೆ ಆಗಬಾರದು. ಮಗುವಿನ ಬೆಳವಣಿಗೆ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಕೃಷ್ಣ, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>