<p><strong>ತುಮಕೂರು</strong>: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಶೋಕ ನಗರ ನಾಗರಿಕ ಹಿತರಕ್ಷಣಾ ಸಮಿತಿಯಿಂದ ನಗರದಲ್ಲಿ ಭಾನುವಾರ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಪೌರ ಕಾರ್ಮಿಕರಿಗೆ ಆಟೋಟ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಕಬಡ್ಡಿ, ರಂಗೋಲಿ ಸ್ಪರ್ಧೆ, ಗೀತೆ ಗಾಯನ, ರಸಪ್ರಶ್ನೆ, ಗುಂಡು ಎಸೆತ ಸೇರಿದಂತೆ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪೌರ ಕಾರ್ಮಿಕರು ಒಳಗೊಂಡಂತೆ ಎಲ್ಲರು ಸಕ್ರಿಯವಾಗಿ ಹಲವು ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಿದ್ದರು.</p>.<p>ಮಹಾನಗರ ಪಾಲಿಕೆಯ ಆಯುಕ್ತೆ ಬಿ.ವಿ.ಅಶ್ವಿಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ಪ್ರತಿ ನಿತ್ಯ ಕೆಲಸದಲ್ಲಿ ನಿರತರಾಗಿರುತ್ತಾರೆ. ಅವರಿಗೆ ಹಲವು ಸ್ಪರ್ಧೆಗಳನ್ನು ಆಯೋಜಿಸಿರುವುದು ಉತ್ತಮ ನಡೆ. ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯ ಎಚ್.ಮಲ್ಲಿಕಾರ್ಜುನಯ್ಯ, ‘ಇದು ಕೇವಲ ಸ್ಪರ್ಧೆಯಾಗಿರದೆ, ಎಲ್ಲರೂ ಒಟ್ಟಾಗಿ ಬೆರೆಯುವ, ಪರಸ್ಪರ ಭಾವೈಕ್ಯತೆ ಬೆಳೆಸುವ ಆಶಯದ ಕಾರ್ಯಕ್ರಮವಾಗಿದೆ. ವಾರ್ಡ್ನ ಜನರಿಗಾಗಿ ಆರೋಗ್ಯ ತಪಾಸಣಾ ಶಿಬಿರ, ಉದ್ಯೋಗ ಮೇಳ, ಮಕ್ಕಳ ಬೇಸಿಗೆ ಶಿಬಿರ ಏರ್ಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಕೆ.ವೆಂಕಟಸ್ವಾಮಿ, ಕಾರ್ಯದರ್ಶಿ ಬಿ.ಆರ್.ಉಮೇಶ್, ಸಾಹಿತಿ ಮುರಳಿಕೃಷ್ಣಪ್ಪ, ಮುಖಂಡರಾದ ಅಶೋಕ್ಕುಮಾರ್, ಸಂಜಯ್ನಾಯಕ್, ಗುರುಪ್ರಸಾದ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಶೋಕ ನಗರ ನಾಗರಿಕ ಹಿತರಕ್ಷಣಾ ಸಮಿತಿಯಿಂದ ನಗರದಲ್ಲಿ ಭಾನುವಾರ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಪೌರ ಕಾರ್ಮಿಕರಿಗೆ ಆಟೋಟ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಕಬಡ್ಡಿ, ರಂಗೋಲಿ ಸ್ಪರ್ಧೆ, ಗೀತೆ ಗಾಯನ, ರಸಪ್ರಶ್ನೆ, ಗುಂಡು ಎಸೆತ ಸೇರಿದಂತೆ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪೌರ ಕಾರ್ಮಿಕರು ಒಳಗೊಂಡಂತೆ ಎಲ್ಲರು ಸಕ್ರಿಯವಾಗಿ ಹಲವು ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಿದ್ದರು.</p>.<p>ಮಹಾನಗರ ಪಾಲಿಕೆಯ ಆಯುಕ್ತೆ ಬಿ.ವಿ.ಅಶ್ವಿಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ಪ್ರತಿ ನಿತ್ಯ ಕೆಲಸದಲ್ಲಿ ನಿರತರಾಗಿರುತ್ತಾರೆ. ಅವರಿಗೆ ಹಲವು ಸ್ಪರ್ಧೆಗಳನ್ನು ಆಯೋಜಿಸಿರುವುದು ಉತ್ತಮ ನಡೆ. ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯ ಎಚ್.ಮಲ್ಲಿಕಾರ್ಜುನಯ್ಯ, ‘ಇದು ಕೇವಲ ಸ್ಪರ್ಧೆಯಾಗಿರದೆ, ಎಲ್ಲರೂ ಒಟ್ಟಾಗಿ ಬೆರೆಯುವ, ಪರಸ್ಪರ ಭಾವೈಕ್ಯತೆ ಬೆಳೆಸುವ ಆಶಯದ ಕಾರ್ಯಕ್ರಮವಾಗಿದೆ. ವಾರ್ಡ್ನ ಜನರಿಗಾಗಿ ಆರೋಗ್ಯ ತಪಾಸಣಾ ಶಿಬಿರ, ಉದ್ಯೋಗ ಮೇಳ, ಮಕ್ಕಳ ಬೇಸಿಗೆ ಶಿಬಿರ ಏರ್ಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಕೆ.ವೆಂಕಟಸ್ವಾಮಿ, ಕಾರ್ಯದರ್ಶಿ ಬಿ.ಆರ್.ಉಮೇಶ್, ಸಾಹಿತಿ ಮುರಳಿಕೃಷ್ಣಪ್ಪ, ಮುಖಂಡರಾದ ಅಶೋಕ್ಕುಮಾರ್, ಸಂಜಯ್ನಾಯಕ್, ಗುರುಪ್ರಸಾದ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>