<p><strong>ತುಮಕೂರು:</strong> ಕಿತ್ತೂರು ಕ್ರಾಂತಿಯ 200ನೇ ವರ್ಷಾಚರಣೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಫೆ. 21ರಂದು ಬೃಹತ್ ರ್ಯಾಲಿ ಏರ್ಪಡಿಸಿದ್ದು, ಜಿಲ್ಲೆಯಿಂದ ‘ಕಿತ್ತೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ಮಹಿಳೆಯರು ಕಿತ್ತೂರಿಗೆ ಪ್ರಯಾಣ ಬೆಳಸಲಿದ್ದಾರೆ. ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸುವಂತೆ ಒಕ್ಕೂಟದ ಬಾ.ಹ.ರಮಾಕುಮಾರಿ, ಜಿ.ಮಲ್ಲಿಕಾ ಬಸವರಾಜು, ಡಿ.ಅರುಂಧತಿ, ರಾಣಿ ಚಂದ್ರಶೇಖರ್, ದೀಪಿಕಾ ಮರಳೂರು ಮನವಿ ಮಾಡಿದ್ದಾರೆ.</p>.<p>ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಲು, ದ್ವೇಷ ಅಳಿಸಿ, ಪ್ರೀತಿ ಮೂಡಿಸುವುದಕ್ಕೆ ದೇಶದ ವಿವಿಧ ಭಾಗಗಳಿಂದ ಸುಮಾರು 3 ಸಾವಿರ ಜನ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಹೊರಟು ಕಿತ್ತೂರು ಸೇರುತ್ತಾರೆ. ‘ನಾನೂ ರಾಣಿಚನ್ನಮ್ಮ’ ಎಂಬ ಘೋಷಣೆ ಮೊಳಗಲಿದೆ ಎಂದು ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಸೌಹಾರ್ದ ಬದುಕಿಗಾಗಿ ಇಡೀ ಭಾರತದ ಮಹಿಳೆಯರು ಒಂದೆಡೆ ಸೇರಲಿದ್ದಾರೆ. ಹೋರಾಟ ಮತ್ತು ಸಾಮಾಜಿಕ ಸಂಘಟನೆಯಲ್ಲಿ ನಿರತರಾಗಿರುವ ಪ್ರಮುಖರು ಕಿತ್ತೂರಿನಲ್ಲಿ ನಡೆಯುವ ಜಾಥಾದಲ್ಲಿ ಭಾಗವಹಿಸಲಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕಿತ್ತೂರು ಕ್ರಾಂತಿಯ 200ನೇ ವರ್ಷಾಚರಣೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಫೆ. 21ರಂದು ಬೃಹತ್ ರ್ಯಾಲಿ ಏರ್ಪಡಿಸಿದ್ದು, ಜಿಲ್ಲೆಯಿಂದ ‘ಕಿತ್ತೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ಮಹಿಳೆಯರು ಕಿತ್ತೂರಿಗೆ ಪ್ರಯಾಣ ಬೆಳಸಲಿದ್ದಾರೆ. ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸುವಂತೆ ಒಕ್ಕೂಟದ ಬಾ.ಹ.ರಮಾಕುಮಾರಿ, ಜಿ.ಮಲ್ಲಿಕಾ ಬಸವರಾಜು, ಡಿ.ಅರುಂಧತಿ, ರಾಣಿ ಚಂದ್ರಶೇಖರ್, ದೀಪಿಕಾ ಮರಳೂರು ಮನವಿ ಮಾಡಿದ್ದಾರೆ.</p>.<p>ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಲು, ದ್ವೇಷ ಅಳಿಸಿ, ಪ್ರೀತಿ ಮೂಡಿಸುವುದಕ್ಕೆ ದೇಶದ ವಿವಿಧ ಭಾಗಗಳಿಂದ ಸುಮಾರು 3 ಸಾವಿರ ಜನ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಹೊರಟು ಕಿತ್ತೂರು ಸೇರುತ್ತಾರೆ. ‘ನಾನೂ ರಾಣಿಚನ್ನಮ್ಮ’ ಎಂಬ ಘೋಷಣೆ ಮೊಳಗಲಿದೆ ಎಂದು ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಸೌಹಾರ್ದ ಬದುಕಿಗಾಗಿ ಇಡೀ ಭಾರತದ ಮಹಿಳೆಯರು ಒಂದೆಡೆ ಸೇರಲಿದ್ದಾರೆ. ಹೋರಾಟ ಮತ್ತು ಸಾಮಾಜಿಕ ಸಂಘಟನೆಯಲ್ಲಿ ನಿರತರಾಗಿರುವ ಪ್ರಮುಖರು ಕಿತ್ತೂರಿನಲ್ಲಿ ನಡೆಯುವ ಜಾಥಾದಲ್ಲಿ ಭಾಗವಹಿಸಲಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>