<p><strong>ಕೊರಟಗೆರೆ</strong>: ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ‘ಖುಷ್ಕಿ ಬೇಸಾಯ ಪ್ರಾಯೋಜನೆಯ ಮಳೆಯಾಶ್ರಿತ ಸಮಗ್ರ ಕೃಷಿ ಪದ್ಧತಿ’ ಸಂವಾದ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಭಾರತೀಯ ಅನುಸಂಧಾನ ಪರಿಷತ್ತಿನ ಪಂಚ ವಾರ್ಷಿಕ ಪರಿಶೀಲನಾ ಸಮಿತಿ ಅಧ್ಯಕ್ಷ ಪಂಜಾಬ್ ಸಿಂಗ್ ಹಾಗೂ ಸದಸ್ಯರಾದ ಎ.ಕೆ. ಸಿಂಗ್, ಪಿ. ರಾಮಸುಂದರಂ ಅವರು ರೈತರೊಂದಿಗೆ ಚರ್ಚಿಸಿದರು.</p>.<p>ಖುಷ್ಕಿ ಬೇಸಾಯದಲ್ಲಿ ಮಳೆ ನೀರು ಕೊಯ್ಲು ಮಾಡಿಕೊಳ್ಳಲು ಕೃಷಿ ಹೊಂಡ ನಿರ್ಮಿಸಿಕೊಂಡು ಹೆಚ್ಚು ಆದಾಯ ಬರುವ ಬೆಳೆಗಳನ್ನು ಬೆಳೆಯಬೇಕು. ಇದರಿಂದ ಖುಷ್ಕಿ ಭೂಮಿಯಲ್ಲಿ ಬೆಳೆಗಳ ವೈವಿಧ್ಯ ಹೆಚ್ಚಿಸಬಹುದು. ಸುಧಾರಿತ ಖುಷ್ಕಿ ತಾಂತ್ರಿಕತೆ ಅಳವಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲ್ಲೂಕು, ನೆಲಮಂಗಲ, ಮಾಗಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 200ಕ್ಕೂ ಹೆಚ್ಚು ಪ್ರಗತಿಪರ ರೈತರು ಪಾಲ್ಗೊಂಡಿದ್ದರು.</p>.<p>ಕೇಂದ್ರೀಯ ಖುಷ್ಕಿ ಬೇಸಾಯ ಸಂಶೋಧನಾ ಸಂಸ್ಥೆ, ಹೈದರಾಬಾದ್ನ ಪ್ರಧಾನ ವಿಜ್ಞಾನಿ ಜಿ.ರವೀಂದ್ರಚಾರಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಖುಷ್ಕಿ ಬೇಸಾಯ ಪ್ರಾಯೋಜನೆಯ ವಿಜ್ಞಾನಿಗಳಾದ ಮೂಡಲಗಿರಿಯಪ್ಪ, ಬಿ.ಜಿ ವಾಸಂತಿ, ಎಚ್.ಎಸ್. ಲತಾ, ಕೆ.ದೇವರಾಜ, ಡಿ.ಎಚ್.ರೂಪಶ್ರೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ</strong>: ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ‘ಖುಷ್ಕಿ ಬೇಸಾಯ ಪ್ರಾಯೋಜನೆಯ ಮಳೆಯಾಶ್ರಿತ ಸಮಗ್ರ ಕೃಷಿ ಪದ್ಧತಿ’ ಸಂವಾದ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಭಾರತೀಯ ಅನುಸಂಧಾನ ಪರಿಷತ್ತಿನ ಪಂಚ ವಾರ್ಷಿಕ ಪರಿಶೀಲನಾ ಸಮಿತಿ ಅಧ್ಯಕ್ಷ ಪಂಜಾಬ್ ಸಿಂಗ್ ಹಾಗೂ ಸದಸ್ಯರಾದ ಎ.ಕೆ. ಸಿಂಗ್, ಪಿ. ರಾಮಸುಂದರಂ ಅವರು ರೈತರೊಂದಿಗೆ ಚರ್ಚಿಸಿದರು.</p>.<p>ಖುಷ್ಕಿ ಬೇಸಾಯದಲ್ಲಿ ಮಳೆ ನೀರು ಕೊಯ್ಲು ಮಾಡಿಕೊಳ್ಳಲು ಕೃಷಿ ಹೊಂಡ ನಿರ್ಮಿಸಿಕೊಂಡು ಹೆಚ್ಚು ಆದಾಯ ಬರುವ ಬೆಳೆಗಳನ್ನು ಬೆಳೆಯಬೇಕು. ಇದರಿಂದ ಖುಷ್ಕಿ ಭೂಮಿಯಲ್ಲಿ ಬೆಳೆಗಳ ವೈವಿಧ್ಯ ಹೆಚ್ಚಿಸಬಹುದು. ಸುಧಾರಿತ ಖುಷ್ಕಿ ತಾಂತ್ರಿಕತೆ ಅಳವಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲ್ಲೂಕು, ನೆಲಮಂಗಲ, ಮಾಗಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 200ಕ್ಕೂ ಹೆಚ್ಚು ಪ್ರಗತಿಪರ ರೈತರು ಪಾಲ್ಗೊಂಡಿದ್ದರು.</p>.<p>ಕೇಂದ್ರೀಯ ಖುಷ್ಕಿ ಬೇಸಾಯ ಸಂಶೋಧನಾ ಸಂಸ್ಥೆ, ಹೈದರಾಬಾದ್ನ ಪ್ರಧಾನ ವಿಜ್ಞಾನಿ ಜಿ.ರವೀಂದ್ರಚಾರಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಖುಷ್ಕಿ ಬೇಸಾಯ ಪ್ರಾಯೋಜನೆಯ ವಿಜ್ಞಾನಿಗಳಾದ ಮೂಡಲಗಿರಿಯಪ್ಪ, ಬಿ.ಜಿ ವಾಸಂತಿ, ಎಚ್.ಎಸ್. ಲತಾ, ಕೆ.ದೇವರಾಜ, ಡಿ.ಎಚ್.ರೂಪಶ್ರೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>